ಬೆಂಗಳೂರು:ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ ಕೈಗೊಳ್ಳುವ ಸಂದರ್ಭದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್(ಬೇಸ್) ಕ್ಯಾಂಪ್ ಬಳಿ ಹೊಸದಾಗಿ ಡಾಂಬರೀಕರಣ ಮಾಡಿದ ರಸ್ತೆ ಕುಸಿದಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ದ ಕ್ರಮ ತೆಗೆದುಕೊಳ್ಳುವಂತೆ ಬಿಬಿಎಂಪಿ ಆಯುಕ್ತರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.
ಪ್ರಾಥಮಿಕ ತನಿಖೆಯಿಂದ ಈ ಪ್ರದೇಶದಲ್ಲಿ ನೀರಿನ ಪೈಪ್ ಸೋರಿಕೆಯಿಂದ ರಸ್ತೆ ಕುಸಿದಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಸೂಕ್ತ ತನಿಖೆಗೆ ಸಿಎಂ ನವದೆಹಲಿಯಿಂದಲೇ ಆದೇಶಿಸಿದ್ದು, ಬೆಂಗಳೂರಿಗೆ ವಾಪಸ್ಸಾದ ನಂತರ ಪರಿಶೀಲನೆ ನಡೆಸಿ ಮುಂದಿನ ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ:ಮಂಗಳೂರು: 3 ಮಕ್ಕಳನ್ನು ಬಾವಿಗೆ ತಳ್ಳಿ ಕೊಂದು ಪತ್ನಿಯೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ