ಕರ್ನಾಟಕ

karnataka

ಪ್ರಧಾನಿ ಬಂದಾಗ ಹಾಕಿದ ಡಾಂಬರು ಕುಸಿತ; ತಪ್ಪಿತಸ್ಥರ ವಿರುದ್ದ ಕ್ರಮಕ್ಕೆ ಸಿಎಂ ಸೂಚನೆ

By

Published : Jun 23, 2022, 10:29 PM IST

ಬಸವರಾಜ ಬೊಮ್ಮಾಯಿ

ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ (ಬೇಸ್) ಕ್ಯಾಂಪ್ ಬಳಿ ಹೊಸದಾಗಿ ಡಾಂಬರೀಕರಣ ಮಾಡಿದ ರಸ್ತೆ ನೀರಿನ ಪೈಪ್ ಸೋರಿಕೆಯಿಂದ ಕುಸಿದಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಬೆಂಗಳೂರು:ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ ಕೈಗೊಳ್ಳುವ ಸಂದರ್ಭದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್(ಬೇಸ್) ಕ್ಯಾಂಪ್ ಬಳಿ ಹೊಸದಾಗಿ ಡಾಂಬರೀಕರಣ ಮಾಡಿದ ರಸ್ತೆ ಕುಸಿದಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ದ ಕ್ರಮ ತೆಗೆದುಕೊಳ್ಳುವಂತೆ ಬಿಬಿಎಂಪಿ ಆಯುಕ್ತರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.

ಪ್ರಾಥಮಿಕ ತನಿಖೆಯಿಂದ ಈ ಪ್ರದೇಶದಲ್ಲಿ ನೀರಿನ ಪೈಪ್ ಸೋರಿಕೆಯಿಂದ ರಸ್ತೆ ಕುಸಿದಿರುವುದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಸೂಕ್ತ ತನಿಖೆಗೆ ಸಿಎಂ ನವದೆಹಲಿಯಿಂದಲೇ ಆದೇಶಿಸಿದ್ದು, ಬೆಂಗಳೂರಿಗೆ ವಾಪಸ್ಸಾದ ನಂತರ ಪರಿಶೀಲನೆ ನಡೆಸಿ ಮುಂದಿನ ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ:ಮಂಗಳೂರು: 3 ಮಕ್ಕಳನ್ನು ಬಾವಿಗೆ ತಳ್ಳಿ ಕೊಂದು ಪತ್ನಿಯೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

TAGGED:

ABOUT THE AUTHOR

...view details