ಕರ್ನಾಟಕ

karnataka

Karnataka Rain: ಹಾನಿ ಪರಿಹಾರದ ಬಗ್ಗೆ ಸಭೆ ನಡೆಸಿ ಚರ್ಚಿಸಲಾಗುವುದು.. ಸಿಎಂ ಬೊಮ್ಮಾಯಿ

By

Published : Nov 21, 2021, 1:02 PM IST

Updated : Nov 21, 2021, 1:34 PM IST

ರಾಜ್ಯದಲ್ಲಿ ಜುಲೈ, ಆಗಸ್ಟ್, ಸೆಪ್ಟೆಂಬರ್​​ನಲ್ಲಿ ಸುರಿದ ಮಳೆ(Karnataka Rain)ಗೆ 3 ಲಕ್ಷ ರೂ. ಬೆಳೆ ಹಾನಿಯಾಗಿತ್ತು. 130 ಕೋಟಿ ಬೆಳೆ ಪರಿಹಾರ ಬಾಕಿ ಇದೆ. ಮೊನ್ನೆ ಅದನ್ನು ಕೊಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಹಾನಿ ಪರಿಹಾರದ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸುವುದಾಗಿ ಸಿಎಂ ಬೊಮ್ಮಾಯಿ(CM Bommai) ತಿಳಿಸಿದ್ದಾರೆ.

CM Bommai to hold meeting on rain loss in karnataka
Karnataka Rain: ಮಳೆ ಪರಿಹಾರದ ಬಗ್ಗೆ ಸಭೆ ನಡೆಸಿ ಚರ್ಚಿಸಲಾಗುವುದು: ಸಿಎಂ ಬೊಮ್ಮಾಯಿ

ಬೆಂಗಳೂರು:ರಾಜ್ಯದಲ್ಲಿ ನಿರಂತರವಾಗಿ ಅಕಾಲಿಕ ಮಳೆ (Heavy rain in Karnataka) ಸುರಿಯುತ್ತಿದ್ದು, ಎಲ್ಲೆಡೆ ಲಕ್ಷಾಂತರ ರೂಪಾಯಿ ಹಾನಿ ಸಂಭವಿಸಿದೆ. ಮಳೆ ಹಾನಿ (Rain Effect) ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai) ಅವರು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್​ ಸಿಇಒಗಳ ಸಭೆ ನಡೆಸಿ ಪರಿಹಾರ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ತಮ್ಮ ನಿವಾಸದಲ್ಲಿ ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಕಾಲಿಕ ಮಳೆಯಾಗುತ್ತಿದೆ. ದಕ್ಷಿಣ, ಉತ್ತರ ಒಳನಾಡು, ಕರಾವಳಿಗಳಲ್ಲಿ ವ್ಯಾಪಕ ಮಳೆಯಾಗಿದ್ದು, ಕಳೆದ ಮೂರು ದಿನಗಳಲ್ಲಿ ಬೆಳೆ ಹಾನಿ, ರಸ್ತೆ ಹಾನಿ, ಕೆಲವು ಸಾವು ಸಂಭವಿಸಿದೆ. ಜುಲೈ, ಆಗಸ್ಟ್, ಸೆಪ್ಟೆಂಬರ್​​ನಲ್ಲಿ ಸುರಿದ ಮಳೆಗೆ 3 ಲಕ್ಷ ರೂ. ಬೆಳೆ ಹಾನಿಯಾಗಿತ್ತು. 130 ಕೋಟಿ ಬೆಳೆ ಪರಿಹಾರ ಬಾಕಿ ಇದೆ. ಮೊನ್ನೆ ಅದನ್ನು ಕೊಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇಂದು ಸಂಜೆ ಅಧಿಕಾರಿಗಳು ಕೊಟ್ಟ ವರದಿ ಬಗ್ಗೆ ಚರ್ಚೆ ನಡೆಸಿ, ಪರಿಹಾರದ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮಾಹಿತಿ ನೀಡಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ

ಆಯೋಗದ ಅನುಮತಿ ಅಗತ್ಯ:

ಕೆಲವು ಸಚಿವರು ಜಿಲ್ಲೆಗಳಲ್ಲೇ ಇದ್ದಾರೆ. ಜಿಲ್ಲೆಗಳಿಗೆ ಹೋಗಲು ಚುನಾವಣಾ ಆಯೋಗದ ಅನುಮತಿ ನೀಡಬೇಕು. ಶನಿವಾರ ಸಿ.ಎಸ್ ಮೂಲಕ ಆಯೋಗಕ್ಕೆ ಈ ಬಗ್ಗೆ ಕೇಳಿದ್ದೇವೆ. ಆಯೋಗ ಅನುಮತಿ ಕೊಟ್ಟರೆ ಎಲ್ಲ ಸಚಿವರೂ ಜಿಲ್ಲೆಗಳಿಗೆ ಹೋಗಲಿದ್ದಾರೆ ಎಂದು ಸಿಎಂ ಹೇಳಿದರು.

ಬಿಡಿಎ ಮೇಲೆ ಎಸಿಬಿ ದಾಳಿ ವಿಚಾರ:

ನಮ್ಮ ಸರ್ಕಾರವು ಯಾವುದೇ ರೀತಿಯ ಭ್ರಷ್ಟಾಚಾರಕ್ಕೆ ಅವಕಾಶ ಕೊಡುವುದಿಲ್ಲ ಎಂದು ಈ ಹಿಂದೆಯೇ ಹೇಳಿದ್ದೇವೆ. ಎಸಿಬಿ ದಾಳಿ(ACB raid on BDA) ಬಳಿಕ ಅವರು ಕೊಡುವ ವರದಿ, ಶಿಫಾರಸು ಮೇರೆಗೆ ಕ್ರಮ ಜರುಗಲಿದೆ. ಬಿಡಿಎನಲ್ಲಿ ಯಾರನ್ನೂ ರಕ್ಷಿಸುವ ಕೆಲಸ ಮಾಡುವುದಿಲ್ಲ. ಬಿಡಿಎ ಭ್ರಷ್ಟಾಚಾರಗಳ ಬಗ್ಗೆ ಅಧ್ಯಕ್ಷ ವಿಶ್ವನಾಥ್ ಅವರೂ ನನಗೆ ಹೇಳಿದ್ದರು. ಯಾವುದೇ ತಪ್ಪಿತಸ್ಥ ಅಧಿಕಾರಿ ಇದ್ದರೂ ಕ್ರಮ ಖಚಿತ. ಅಕ್ರಮ ಎಸಗಿದ ಹಿಂದಿನ ಅಧಿಕಾರಿಗಳ ವಿರುದ್ಧವೂ ಕ್ರಮ ತೆಗೆದುಕೊಳ್ಳಲಾಗುವುದು. ಬಿಡಿಎಯನ್ನು ಒಮ್ಮೆ ಸ್ವಚ್ಛ ಮಾಡಬೇಕು, ಅವರ ಮೂಲಕ‌ ನಾಗರಿಕ ಸೇವೆಯು ಸಮರ್ಪಕವಾಗಿ ಸಿಗುವ ಕೆಲಸ ಆಗುತ್ತದೆ ಎಂದು ಹೇಳಿದರು.

ಬೆಂಗಳೂರಿನ ಮೇಲೆ ವಿಶೇಷ ಕಾಳಜಿ ಇದೆ. ನಾನೂ ಕೂಡಾ ಹಲವು ಕಡೆ ಭೇಟಿ ನೀಡಿ ಪರಿಶೀಲಿಸಿದ್ದೇನೆ, ಮುಂದೆಯೂ ಹೋಗುತ್ತೇನೆ. ಮಳೆ ಮುಗಿದ ಮೇಲೆ ದುರಸ್ತಿ ಕಾಮಗಾರಿಗಳನ್ನು ನಡೆಸಲಾಗುವುದು ಎಂದು ಪ್ರತಿಪಕ್ಷಗಳ ಟೀಕೆಗೆ ಸಿಎಂ ಉತ್ತರಿಸಿದರು.

ಇದನ್ನೂ ಓದಿ:ಪೆಟ್ರೋಲ್‌, ಡೀಸೆಲ್‌ಗಿಂತಲೂ ಕೆಲವು ತರಕಾರಿ ದುಬಾರಿ: ಟೊಮೆಟೋ ಪ್ರತಿ ಕೆ.ಜಿಗೆ 100 ರೂಪಾಯಿ!

Last Updated : Nov 21, 2021, 1:34 PM IST

ABOUT THE AUTHOR

...view details