ಕರ್ನಾಟಕ

karnataka

ಕರ್ನಾಟಕ ಲೋಕಸೇವಾ ಆಯೋಗಕ್ಕೆ ಮೂವರು ಸದಸ್ಯರನ್ನು ನೇಮಕಾತಿ ಮಾಡುವಂತೆ ಸಿಎಂ ಸೂಚನೆ

By

Published : Aug 19, 2023, 7:14 PM IST

KPSC: ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ಹುದ್ದೆಗೆ ನೇಮಕ ಮಾಡುವಂತೆ ಸಿಎಂ ಸೂಚನೆ ನೀಡಿದ್ದಾರೆ.

KPSC
ಲೋಕಸೇವಾ ಆಯೋಗ

ಬೆಂಗಳೂರು:ಕರ್ನಾಟಕ ಲೋಕಸೇವಾ ಆಯೋಗಕ್ಕೆ ಮೂವರು ಸದಸ್ಯರನ್ನು ನೇಮಕಾತಿ ಮಾಡಿ ಆದೇಶ ಹೊರಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಕುರಿತು ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಅವರಿಗೆ ನಿರ್ದೇಶನ ನೀಡಿರುವ ಸಿಎಂ ಸಿದ್ದರಾಮಯ್ಯ, ಬೀದರ್‌ನ ಬಸವರಾಜ ಮಲ್ಗೆ, ಬೆಂಗಳೂರಿನ ಡಾ. ಆರ್. ಕಾವಾಲಮ್ಮ, ಕುವೆಂಪು ವಿಶ್ವವಿದ್ಯಾಲಯದ ಮಾಜಿ ಕುಲಸಚಿವ ಡಾ.ಹೆಚ್. ಎಸ್ ಭೋಜ್ಯಾ ನಾಯ್ಕ ಅವರನ್ನು ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ಸದಸ್ಯರ ಹುದ್ದೆಗೆ ನೇಮಕ ಮಾಡಿ ಆದೇಶ ಹೊರಡಿಸುವಂತೆ ಪತ್ರದಲ್ಲಿ ಸೂಚಿಸಿದ್ದಾರೆ. ಲೋಕಸೇವಾ ಆಯೋಗದಲ್ಲಿ ಮೂವರು ಸದಸ್ಯರ ಹುದ್ದೆಗಳು ಖಾಲಿ ಇದ್ದು, ಈಗ ಈ ಹುದ್ದೆಗೆ ಮಖ್ಯಮಂತ್ರಿಗಳು ನೇಮಕಾತಿ ಮಾಡುವಂತೆ ಆದೇಶಿಸಿದ್ದಾರೆ.

ABOUT THE AUTHOR

...view details