ಬೆಂಗಳೂರು:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜತೆಗೂಡಿ ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜು , ಸಚಿವ ಗೋವಿಂದ ಕಾರಜೋಳ ಭಾನುವಾರ ಬೆಂಗಳೂರಿನ ಗಾಂಧಿ ಭವನದ ಬಳಿ ಇರುವ ಖಾದಿ ಎಂಪೋರಿಯಂನಲ್ಲಿ ಖಾದಿ ಬಟ್ಟೆಗಳನ್ನು ಖರೀದಿಸಿದರು.
ಸಂಕಷ್ಟದಲ್ಲಿರುವ ಖಾದಿ ಮತ್ತು ಗ್ರಾಮೋದ್ಯೋಗ ಸಂಘ-ಸಂಸ್ಥೆಗಳಿಗೆ ಆರ್ಥಿಕ ಬಲ ನೀಡುವ ದೃಷ್ಟಿಯಿಂದ ಸಿಎಂ ಭೇಟಿ ನೀಡಿದ್ದಾರೆ. ತಮ್ಮ ವ್ಯಾಪ್ತಿಯಲ್ಲಿ ಬರುವ ಖಾದಿ ಭಂಡಾರಗಳಿಗೆ ಭೇಟಿ ನೀಡಿ, ಖಾದಿ ಮತ್ತು ಗ್ರಾಮೋದ್ಯೋಗ ಉತ್ಪನ್ನಗಳನ್ನು ಖರೀದಿಸುವಂತೆ ಮುಖ್ಯಮಂತ್ರಿ ಸೇರಿದಂತೆ ಎಲ್ಲಾ ಶಾಸಕರುಗಳಿಗೆ ಎಂಟಿಬಿ ನಾಗರಾಜು ಪತ್ರ ಬರೆದಿದ್ದರು. ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜು ಅವರು ಸ್ವತಃ ತಾವೇ ಅದಕ್ಕೆ ಮೇಲ್ಪಂಕ್ತಿ ಹಾಕಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಇತರ ಸಚಿವರುಗಳನ್ನು ಕರೆದೊಯ್ದು, ಖಾದಿ ಉತ್ಪನ್ನಗಳನ್ನು ಖರೀದಿಸಿದರು.