ನೆಲಮಂಗಲ: ರೈಲ್ವೆ ಹಳಿಗಳ ಮೇಲೆ ಪ್ರೇಮಿಗಳ ಮೃತದೇಹ ಪತ್ತೆಯಾಗಿದ್ದು, ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ನೆಲಮಂಗಲ ಸಮೀಪದ ಗೊಲ್ಲಹಳ್ಳಿ ಮತ್ತು ಚಿಕ್ಕಬಾಣವಾರ ರೈಲ್ವೆ ನಿಲ್ದಾಣದ ನಡುವಿನ ಹುಸ್ಕೂರು ಗ್ರಾಮದ ರೈಲ್ವೆ ಹಳಿ ಬಳಿ ಘಟನೆ ನಡೆದಿದೆ. ಮೃತ ಯುವಕನನ್ನು ನಾಗೇಂದ್ರ (21) ಎಂದು ಗುರುತಿಸಲಾಗಿದೆ. ಯುವತಿಯ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ರೈಲು ಬರುವುದು ನೋಡಿ ಸೇತುವೆಯಿಂದ ಜಿಗಿದು ಬಾಲಕಿ ಸಾವು.. ಇಬ್ಬರಿಗೆ ಗಾಯ
Last Updated :Nov 24, 2022, 2:40 PM IST