ಕರ್ನಾಟಕ

karnataka

ಗುಬ್ಬಿ ಶ್ರೀನಿವಾಸ್ ರಾಜೀನಾಮೆ.. ಶೀಘ್ರ ಶಿವಲಿಂಗೇಗೌಡ, ರಾಮಸ್ವಾಮಿ ಕೈ ಸೇರ್ಪಡೆ: ಗುಬ್ಬಿ ಶ್ರೀನಿವಾಸ್

By

Published : Mar 27, 2023, 5:08 PM IST

Updated : Mar 27, 2023, 7:00 PM IST

ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮಾರ್ಚ್ 31ಕ್ಕೆ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಜೊತೆಗೆ ಶಿವಲಿಂಗೇಗೌಡ, ಎ.ಟಿ. ರಾಮಸ್ವಾಮಿ ಕೂಡ ಕಾಂಗ್ರೆಸ್​ಗೆ ಸೇರುತ್ತಾರೆ ಎಂದು ಅವರು ಹೇಳಿದರು.

gubbi-mla-srinivas-submits-resignation-letter
ಗುಬ್ಬಿ ಶ್ರೀನಿವಾಸ್ ರಾಜೀನಾಮೆ ಪತ್ರ ಸಲ್ಲಿಕೆ, ಶೀಘ್ರ ಶಿವಲಿಂಗೇಗೌಡ, ರಾಮಸ್ವಾಮಿ ಕೈ ಸೇಪರ್ಡೆ: ಗುಬ್ಬಿ ಶ್ರೀನಿವಾಸ್

ಗುಬ್ಬಿ ಶ್ರೀನಿವಾಸ್ ರಾಜೀನಾಮೆ.. ಶೀಘ್ರ ಶಿವಲಿಂಗೇಗೌಡ, ರಾಮಸ್ವಾಮಿ ಕೈ ಸೇರ್ಪಡೆ: ಗುಬ್ಬಿ ಶ್ರೀನಿವಾಸ್

ಬೆಂಗಳೂರು:ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದು, ಇದರ ಬೆನ್ನಲ್ಲೇ ಜೆಡಿಎಸ್ ಪಕ್ಷದ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ರಾಜೀನಾಮೆ ನೀಡಿದ ಬಳಿಕ ಮಾತನಾಡಿದ ಅವರು, ನಾನು ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಮಾರ್ಚ್ 31ಕ್ಕೆ ನಾನು ಅಧಿಕೃತವಾಗಿ ಕಾಂಗ್ರೆಸ್ ಸೇರುತ್ತೇನೆ. ಶಿವಲಿಂಗೇಗೌಡ, ಎ.ಟಿ. ರಾಮಸ್ವಾಮಿ ಅವರು ಕೂಡ ಕಾಂಗ್ರೆಸ್​ಗೆ ಸೇರ್ತಾರೆ. ಗುಬ್ಬಿಯಲ್ಲಿ ಎಲ್ಲ ಕಾಂಗ್ರೆಸ್ ನಾಯಕರು ಒಟ್ಟಾಗಿ ಇದ್ದಾರೆ. ಅವರ ಬೆಂಬಲದೊಂದಿಗೆ ಗುಬ್ಬಿಯಿಂದ ಕಾಂಗ್ರೆಸ್ ಪಕ್ಷದಿಂದ ಗೆಲ್ಲುವ ವಿಶ್ವಾಸ ಇದೆ ಎಂದರು.

ನಾನು ಅಡ್ಡ ಮತದಾನ ಮಾಡಿದ್ದೀನಿ ಎಂದು ಕುಮಾರಸ್ವಾಮಿ ಯಾವ ಆ ಧಾರದಲ್ಲಿ ಹೇಳಿದ್ರೋ ಗೊತ್ತಿಲ್ಲ. ಅವರೇ ಅಡ್ಡ ಮತದಾನ ಮಾಡಿಸಿ ನನ್ನ ತಲೆಗೆ ಕಟ್ಟಿದ್ರು‌ ಎಂದು ಜೆಡಿಎಸ್ ಉಚ್ಚಾಟಿತ ಶಾಸಕ ಗುಬ್ಬಿ ಶ್ರೀನಿವಾಸ್ ತಿಳಿಸಿದರು. ಕಳೆದ 20 ವರ್ಷಗಳಿಂದ ನನಗೆ ಜನತಾದಳದಲ್ಲಿ ಕೆಲಸ ಮಾಡುವುದಕ್ಕೆ ಅವಕಾಶ ಕೊಟ್ಟಿದ್ದಕ್ಕೆ ದೇವೇಗೌಡರಿಗೆ, ಕುಮಾರಸ್ವಾಮಿ, ರೇವಣ್ಣ ಹಾಗೂ ಪಕ್ಷದ ಎಲ್ಲರಿಗೂ ಧನ್ಯವಾದಗಳು. 20 ವರ್ಷಗಳಿಂದ ಭಾವನಾತ್ಮಕ ಸಂಬಂಧವನ್ನು ಇಟ್ಟುಕೊಂಡಿದ್ದೇನೆ. ಎಲ್ಲ ಶಾಸಕರು ಇಲ್ಲಿಯೇ ಉಳಿದುಕೋ ಎಂದು ಒತ್ತಾಯ ಮಾಡ್ತಾ ಇದ್ದಾರೆ. ಪ್ರೀತಿಯಿಂದ ನಾವುಗಳು ಒಂದೇ ಕುಟುಂಬದಲ್ಲಿ ಇದ್ದೆವು. ಕುಮಾರಸ್ವಾಮಿ ಅಕ್ಟೋಬರ್ 21, 2021 ರವರೆಗೆ ನನ್ನ ಜೊತೆ ಚೆನ್ನಾಗಿ, ಅಣ್ಣ ತಮ್ಮಂದಿರಾಗಿ ಇದ್ದರು ಎಂದು ತಿಳಿಸಿದರು.

ಇದನ್ನೂ ಓದಿ :ಸಿದ್ದರಾಮಯ್ಯ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ: ಸಿಎಂ ಬೊಮ್ಮಾಯಿ

ಅಕ್ಟೋಬರ್ 21, 2021 ರಂದು ನನ್ನ ವಿರುದ್ಧ ಬೇರೆ ಅಭ್ಯರ್ಥಿಯನ್ನ ಯಾಕೆ ಹಾಕಿದ್ರು ಗೊತ್ತಿಲ್ಲ.?. ಅದರ ಬಳಿಕ ನನ್ನ ಕುಮಾರಸ್ವಾಮಿ ಅವರ ಬಾಂಧವ್ಯ ಕೆಟ್ಟಿತು. ಆದರು ಕೂಡ ಕಳೆದ 20 ವರ್ಷಗಳ ಕಾಲ ನನಗೆ ಪಕ್ಷದಲ್ಲಿ ಕೆಲಸ ಮಾಡುವುದಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಮಾಜಿ ಪ್ರಧಾನಿ ಹೆಚ್ ​ಡಿ ದೇವೇಗೌಡರು ನನ್ನನ್ನು ಮಗನ ರೀತಿ ನೋಡಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಯಾವುದೇ ಸಮಸ್ಯೆ ಇದ್ದರು ಸಂಘಟನೆಯ ವಿಚಾರದಲ್ಲಿ ರಾಜಿ ಮಾಡಿಸುತ್ತಿದ್ದರು ಎಂದು ವಿವರಿಸಿದರು.

ರಾಜ್ಯಸಭೆ ಮತದಾನದ ವೇಳೆ ಗುಬ್ಬಿ ಶ್ರೀನಿವಾಸ್ ಅಡ್ಡ ಮತದಾನ ಮಾಡಿದ್ದಾರೆ ಎಂಬ ಕಾರಣದಿಂದ ಜೆಡಿಎಸ್ ಅವರನ್ನು ಪಕ್ಷದಿಂದ ಉಚ್ಛಾಟಿಸಿತ್ತು. ಅದಕ್ಕೂ ಮುನ್ನ ತಮ್ಮ ಮತ್ತು ಕುಮಾರಸ್ವಾಮಿ ನಡುವಿನ ಸಂಬಂಧ ಹಳಸಿತ್ತು. ಪರಸ್ಪರ ಆರೋಪ ಪ್ರತ್ಯಾರೋಪದಲ್ಲಿ ತೊಡಗಿದ್ದರು. ಜೆಡಿಎಸ್ ತನ್ನ ಮೊದಲ ಪಟ್ಟಿಯಲ್ಲೇ ಗುಬ್ಬಿ ಕ್ಷೇತ್ರಕ್ಕೆ ನಾಗರಾಜ್​ಗೆ ಅಭ್ಯರ್ಥಿಯಾಗಿ ಟಿಕೆಟ್ ನೀಡಿದೆ.‌ ಇದೀಗ ಗುಬ್ಬಿ ಶ್ರೀನಿವಾಸ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಪಕ್ಷದಿಂದ ಕ್ಷೇತ್ರದಲ್ಲಿ ಕಣಕ್ಕಿಳಿಯಲು ಮುಂದಾಗಿದ್ದಾರೆ.

ಇದನ್ನೂ ಓದಿ :ಜನರಲ್ಲಿ ಜಾತಿ ಧರ್ಮದ ವೈಷಮ್ಯ ಬಿತ್ತಿ, ಒಡೆದು ಆಳುವ ಪಕ್ಷ ನಮ್ಮದಲ್ಲ: ಹೆಚ್ ಡಿ ದೇವೇಗೌಡ

Last Updated :Mar 27, 2023, 7:00 PM IST

ABOUT THE AUTHOR

...view details