ಕರ್ನಾಟಕ

karnataka

ತೆಲಂಗಾಣ ಸಚಿವ ಕೆಟಿಆರ್‌-ಹೆಚ್​ಡಿಕೆ ಭೇಟಿ: ರಾಷ್ಟ್ರ ರಾಜಕಾರಣದ ಬಗ್ಗೆ ಚರ್ಚೆ

By

Published : Sep 11, 2022, 12:10 PM IST

hd-kumaraswamy-meets-minister-kt-ramarao

ಮಾಜಿ ಮುಖ್ಯಮಂತ್ರಿ ಹೆಚ್.​ಡಿ.ಕುಮಾರಸ್ವಾಮಿ ತೆಲಂಗಾಣದ ಪೌರಾಡಳಿತ ಹಾಗೂ ನಗರಾಭಿವೃದ್ಧಿ ಖಾತೆ ಸಚಿವ ಕೆ.ಟಿ.ರಾಮಾರಾವ್‌ ಭೇಟಿ ಮಾಡಿ, ಮಾತುಕತೆ ನಡೆಸಿದರು.

ಹೈದರಾಬಾದ್/ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಭಾನುವಾರ ಬೆಳಗ್ಗೆ ತೆಲಂಗಾಣದ ಪೌರಾಡಳಿತ ಹಾಗೂ ನಗರಾಭಿವೃದ್ಧಿ ಖಾತೆ ಸಚಿವ ಕೆ.ಟಿ.ರಾಮಾರಾವ್‌ (ಕೆಟಿಆರ್)‌ ಅವರೊಂದಿಗೆ ಮಾತುಕತೆ ನಡೆಸಿದರು.

ಉಭಯ ನಾಯಕರು ಉಪಹಾರ ಸೇವಿಸಿದ ನಂತರ ತೆಲಂಗಾಣ, ಕರ್ನಾಟಕ ಸೇರಿದಂತೆ ರಾಷ್ಟ್ರ ರಾಜಕಾರಣದ ಬಗ್ಗೆ ಸಮಾಲೋಚನೆ ನಡೆಸಿದರು. ತೆಲಂಗಾಣದ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ಅವರೊಂದಿಗೆ ಮಾತುಕತೆ ನಡೆಸುವುದಕ್ಕೂ ಮುನ್ನ ಕುಮಾರಸ್ವಾಮಿ, ಸಚಿವರು ಮತ್ತು ಚಂದ್ರಶೇಖರ್‌ ರಾವ್‌ ಅವರ ಪುತ್ರರೂ ಆಗಿರುವ ಕೆಟಿಆರ್‌ ಜೊತೆ ಚರ್ಚೆ ನಡೆಸಿದರು.

ಹೆಚ್​​ಡಿ ಕುಮಾರಸ್ವಾಮಿ - ಕೆ.ಟಿ.ರಾಮಾರಾವ್‌ ಚರ್ಚೆ

ಕಳೆದ ಮೇ ತಿಂಗಳಲ್ಲಿ ಕೆ.ಚಂದ್ರಶೇಖರ್ ರಾವ್ ಅವರು ಬೆಂಗಳೂರಿಗೆ ಆಗಮಿಸಿ ಮಾಜಿ ಪ್ರಧಾನಿಗಳು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದರು.

ಅಂದು ಮಾಧ್ಯಮಗಳ ಜೊತೆ ಮಾತನಾಡಿದ್ದ ಉಭಯ ನಾಯಕರು, ವಿಜಯದಶಮಿ ಹೊತ್ತಿಗೆ ರಾಷ್ಟ್ರ ಮಟ್ಟದಲ್ಲಿ ಪರ್ಯಾಯ ರಾಜಕೀಯ ಶಕ್ತಿಯನ್ನು ಹುಟ್ಟುಹಾಕುವ ಸುಳಿವು ನೀಡಿದ್ದರು. ಆ ನಿಟ್ಟಿನಲ್ಲಿ ಇಬ್ಬರು ನಾಯಕರು ಮಾತುಕತೆ ನಡೆಸಲಿದ್ದಾರೆ. ಮೇಲಾಗಿ, ದಕ್ಷಿಣ ಭಾರತದ ಎಲ್ಲ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳೇ ಅಧಿಕಾರದಲ್ಲಿದ್ದು, ಕರ್ನಾಟಕದಲ್ಲಿಯೂ ಪ್ರಾದೇಶಿಕ ಪಕ್ಷ ಜೆಡಿಎಸ್ ಅಧಿಕಾರಕ್ಕೆ ಬರಬೇಕು ಎನ್ನುವುದು ಕೆಸಿಆರ್ ಅವರ ಒತ್ತಾಸೆಯಾಗಿದೆ. ಈ ನಿಟ್ಟಿನಲ್ಲಿ ಹಿರಿಯರಾದ ಅವರನ್ನು ಭೇಟಿ ಮಾಡಲಾಗುತ್ತಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಇದೇ ತಿಂಗಳ 5ರಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ನವದೆಹಲಿಯಲ್ಲಿರುವ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಆಗಮಿಸಿ ಕುಮಾರಸ್ವಾಮಿ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಿದ್ದರು.

ಇದನ್ನೂ ಓದಿ:ದೇಶದಲ್ಲಿ ಆಗುವ ಬೆಳವಣಿಗೆ ಕಾದು ನೋಡಿ.. ದೆಹಲಿಯಲ್ಲಿ ನಿತೀಶ್ ಕುಮಾರ್ ಭೇಟಿ ಬಳಿಕ ಹೆಚ್​ಡಿಕೆ ಪ್ರತಿಕ್ರಿಯೆ

ABOUT THE AUTHOR

...view details