ಕರ್ನಾಟಕ

karnataka

ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ನಲುಗಿದ ಸಿಲಿಕಾನ್ ಸಿಟಿ: ಬಡಾವಣೆಗಳು ಜಲಾವೃತ

By

Published : Oct 19, 2022, 10:44 PM IST

Updated : Oct 19, 2022, 10:52 PM IST

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ಕೆಲವು ಬಡಾವಣೆಗಳು ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಮಳೆಗೆ ನಲುಗಿದ ಸಿಲಿಕಾನ್ ಸಿಟಿ  ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆ  ಮಳೆಗೆ ಕೆಲ ಬಡಾವಣೆಗಳು ಜಲಾವೃತ  ಮೋಡ ಕವಿದ ವಾತಾವರಣ  ರಾತ್ರಿ ವೇಳೆಗೆ ನಗರದಲ್ಲಿ ಮಳೆ  ಹಲವು ಪ್ರದೇಶಗಳಲ್ಲಿ ಮಳೆ  Heavy rainfall in Bengaluru  Bengaluru rain news  traffic jam over rain  waterlogged in road over rain
ಮಳೆಗೆ ನಲುಗಿದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆ ಮಳೆಗೆ ಕೆಲ ಬಡಾವಣೆಗಳು ಜಲಾವೃತ ಮೋಡ ಕವಿದ ವಾತಾವರಣ ರಾತ್ರಿ ವೇಳೆಗೆ ನಗರದಲ್ಲಿ ಮಳೆ ಹಲವು ಪ್ರದೇಶಗಳಲ್ಲಿ ಮಳೆ Heavy rainfall in Bengaluru Bengaluru rain news traffic jam over rain waterlogged in road over rain

ಬೆಂಗಳೂರು: ನಗರದಲ್ಲಿ ಕಳೆದ ಮೂರು ದಿನಗಳಿಂದ ಸಾಧಾರಣ ಮಳೆಯಾಗುತ್ತಿದ್ದು, ಬುಧವಾರವೂ ಮುಂದುವರೆದಿದೆ. ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು, ರಾತ್ರಿ ವೇಳೆಗೆ ನಗರದಲ್ಲಿ ಮಳೆ ಸುರಿಯಿತು. ಕೆಲವು ಬಡಾವಣೆಗಳು ಜಲಾವೃತಗೊಂಡಿವೆ.

ಬೆಂಗಳೂರಿನಲ್ಲಿ ಮಳೆ

ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿಯದೆ ರಸ್ತೆಯಲ್ಲೇ ನಿಂತಿದೆ. ಬಿಳೇಕಹಳ್ಳಿ, ಬೊಮ್ಮನಹಳ್ಳಿ ಭಾಗದ ರಸ್ತೆಗಳು ಕೆರೆಗಳಾಗಿ ಮಾರ್ಪಟ್ಟಿದ್ದವು. ಬನ್ನೇರುಘಟ್ಟ ಮುಖ್ಯರಸ್ತೆ, ಮಹದೇವಪುರ ಹಾಗೂ ಬೆಳ್ಳಂದೂರಿನ ಕೆಲ ಬಡಾವಣೆಗಳು ಮಳೆ ನೀರಿನಲ್ಲಿ ತೊಯ್ದು ಹೋಗಿವೆ. ಕೆ.ಆರ್.ಮಾರ್ಕೆಟ್, ಮೆಜೆಸ್ಟಿಕ್, ಜಯನಗರ, ಗಾಂಧಿ ಬಜಾರ್, ಜೆಪಿ ನಗರ, ರಾಜಾಜಿನಗರ, ಮಲ್ಲೇಶ್ವರ, ಬಸವೇಶ್ವರ ನಗರ, ಕುರುಬರಹಳ್ಳಿ ಸೇರಿ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ. ರಸ್ತೆಗುಂಡಿಗಳಲ್ಲಿ ನೀರು ತುಂಬಿ ವಾಹನ ಸವಾರರಿಗೆ ಕಿರಿಕಿರಿ ಉಂಟಾಗುತ್ತಿದೆ.

175 ಮಿ.ಮೀಟರ್​ಗಿಂತ ಹೆಚ್ಚು ಮಳೆ: ಈ ವರ್ಷ ಇಲ್ಲಿಯವರೆಗೆ ನಗರದಲ್ಲಿ 175 ಮಿ.ಮೀಟರ್‌​ಗಿಂತ ಹೆಚ್ಚು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನೂ ಓದಿ:ತುಮಕೂರು: ಮಳೆ ನೀರಿನಲ್ಲಿ ಕೊಚ್ಚಿ ಹೋದ ಬೈಕ್​, ಸವಾರನ ರಕ್ಷಣೆ

Last Updated : Oct 19, 2022, 10:52 PM IST

ABOUT THE AUTHOR

...view details