ಕರ್ನಾಟಕ

karnataka

ಕೆ.ಆರ್​.ಪುರ ಪೊಲೀಸ್​ ಠಾಣೆ ಉದ್ಘಾಟನೆ: ಸಿಎಂ ಅನುಪಸ್ಥಿತಿಯಲ್ಲಿ ಭೈರತಿ ಬಸವರಾಜ್​​​​ ಚಾಲನೆ

By

Published : Jun 19, 2020, 5:38 PM IST

Updated : Jun 19, 2020, 8:08 PM IST

Inauguration of KR Pura Police Station by bhairathi Basavaraj
ಕೆಆರ್​ಪುರ ಪೊಲೀಸ್​ ಠಾಣೆ ಉದ್ಘಾಟನೆ

ಕೆ.ಆರ್.ಪುರ ಭಾಗದಲ್ಲಿ ಟ್ರಾಫಿಕ್ ಪೊಲೀಸ್ ಠಾಣೆಯ ಅವಶ್ಯಕತೆ ಹೆಚ್ಚಿತ್ತು. ಇಂದು ಠಾಣೆ ಉದ್ಘಾಟಿಸುವ ಮೂಲಕ ಪೊಲೀಸ್ ಇಲಾಖೆಗೆ ಶಕ್ತಿ ತುಂಬುವ ಕೆಲಸ ಮಾಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್​​ ಹೇಳಿದರು.

ಬೆಂಗಳೂರು: ನಗರದ ಕೆ.ಆರ್​.ಪುರದಲ್ಲಿ ಹೊಸದಾಗಿ ನಿರ್ಮಿಸಿರುವ ಪೊಲೀಸ್ ಕ್ವಾಟ್ರಸ್​ ಹಾಗೂ ಠಾಣೆಯನ್ನು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಆನ್​ಲೈನ್​​ ಮೂಲಕ ಸಾಂಕೇತಿಕವಾಗಿ ಉದ್ಘಾಟಿಸಿದ್ದು, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅಧಿಕೃತವಾಗಿ ಚಾಲನೆ ನೀಡಿದ್ದಾರೆ.

ಬಳಿಕ ಮಾತನಾಡಿದ ಅವರು, ಕಟ್ಟಡ ನಿರ್ಮಾಣಗೊಂಡು ಎರಡು ವರ್ಷ ಕಳೆದಿದ್ದರೂ ಉದ್ಘಾಟನೆಯಾಗಿರಲಿಲ್ಲ. ಅಲ್ಲದೇ ಸಿಬ್ಬಂದಿಗಳು ಸರಿಯಾದ ಜಾಗವಿರದ ಕಾರಣ ಇಲ್ಲಿಯವರೆಗೆ ಶಿಕ್ಷಣಾಧಿಕಾರಿಯವರಿಗೆ ಸೇರಿದ ಚಿಕ್ಕ ಕೊಠಡಿಯಲ್ಲಿ ಕೆಲಸ ಮಾಡುತ್ತಿದ್ದರು. ಕೆ.ಆರ್.ಪುರ ಭಾಗದಲ್ಲಿ ಟ್ರಾಫಿಕ್ ಪೊಲೀಸ್ ಠಾಣೆಯ ಅವಶ್ಯಕತೆ ಹೆಚ್ಚಿತ್ತು. ಹೀಗಾಗಿ ಇಂದು ಠಾಣೆ ಉದ್ಘಾಟಿಸುವ ಮೂಲಕ ಪೊಲೀಸ್ ಇಲಾಖೆಗೆ ಶಕ್ತಿ ತುಂಬುವ ಕೆಲಸ ಮಾಡಲಾಗಿದೆ ಎಂದರು.

ಕೆಆರ್​ಪುರ ಪೊಲೀಸ್​ ಠಾಣೆ ಉದ್ಘಾಟನೆ
ಅಲ್ಲದೆ ಸಂಚಾರಿ ಠಾಣೆ ಹಾಗೂ ಪೊಲೀಸ್ ವಸತಿ ಸಮಚ್ಚಯಗಳು ನಿರ್ಮಾಣಗೊಂಡು ಹಲವು ದಿನಗಳು ಕಳೆದಿದ್ದು, ಉದ್ಘಾಟನೆಗೆ ಕಾಲ ಕೂಡಿ ಬಂದಿರಲಿಲ್ಲ ಎಂದರು.

ಕೊರೊನಾ ವೈರಸ್ ಆತಂಕ:ದೊಡ್ಡ ಕಾರ್ಯಕ್ರಮ ಮಾಡುವ ಮೂಲಕ ಉದ್ಘಾಟನೆಯ ಯೋಜನೆ ರೂಪಿಸಲಾಗಿತ್ತು. ಆದರೆ ಕೊರೊನಾ ವೈರಸ್ ಹೆಚ್ಚಾಗಿ ಹರಡುತ್ತಿರುವುದರಿಂದ ಮಾನ್ಯ ಮುಖ್ಯಮಂತ್ರಿಗಳು ಗೃಹ ಕಚೇರಿಯಲ್ಲಿ ಆನ್​​ಲೈನ್ ಮೂಲಕ ಉದ್ಘಾಟಿಸಿದ್ದಾರೆ. ಮುಂದಿನ ದಿನಗಳಲ್ಲಿ ಪೊಲೀಸ್ ವಸತಿ ಗೃಹ ಹಾಗೂ ಪಾದಚಾರಿ ಮೇಲ್ಸೇತುವೆಯನ್ನು ಉದ್ಘಾಟಿಸಲಾಗುತ್ತದೆ ಎಂದು ಭರವಸೆ ನೀಡಿದರು.

Last Updated :Jun 19, 2020, 8:08 PM IST

ABOUT THE AUTHOR

...view details