ಕರ್ನಾಟಕ

karnataka

ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಮುಂದಾದ ಸಚಿವ ಕೃಷ್ಣಬೈರೇಗೌಡ..

By

Published : Jul 29, 2023, 10:52 PM IST

ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಸಚಿವ ಕೃಷ್ಣ ಬೈರೇಗೌಡ ಮುಂದಾಗಿದ್ದಾರೆ. ಪ್ರಸ್ತುತ ವಿವಿಧ 67 ಪ್ರಕರಣಗಳ ಪೈಕಿ ತಹಶೀಲ್ದಾರ್​ 30, ಗ್ರಾಮ ಆಡಳಿತ ಅಧಿಕಾರಿ 12, ಉಪ ನೋಂದಣಿ ಅಧಿಕಾರಿಗಳು 14, ಶಿರಸ್ತೇದಾರ್ 4, ರಾಜಸ್ವ ನಿರೀಕ್ಷಕರು 1, ಪ್ರಥಮ ದರ್ಜೆ ಸಹಾಕರು 2, ದ್ವಿತೀಯ ದರ್ಜೆ ಸಹಾಯಕರು 1, ಕೇಂದ್ರ ಸ್ಥಾನಿಕ ಸಹಾಯಕರು 1, ಜಿಲ್ಲಾ ನೋಂದಾಣಾಧಿಕಾರಿ 1 ಪ್ರಕರಣಗಳು ಒಳಗೊಂಡಿವೆ. ಎಲ್ಲಾ ಕಡತಗಳನ್ನೂ ವಿಲೇವಾರಿ ಮಾಡಲಾಗಿದೆ.

Minister Krishnabhair Gowda
ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಮುಂದಾದ ಸಚಿವ ಕೃಷ್ಣಭೈರೇಗೌಡ

ಬೆಂಗಳೂರು:ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಕೆಲವೊಂದು ಕ್ರಮಗಳನ್ನು ಕೈಗೊಳ್ಳಲು ಸಚಿವ ಕೃಷ್ಣ ಬೈರೇಗೌಡ ಮುಂದಾಗಿದ್ದಾರೆ. ಇದರ ಬೆನ್ನಲ್ಲೇ ಭ್ರಷ್ಟಾಚಾರದ ಆರೋಪ ಹೊತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಯ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ.

ಇಲಾಖೆಯ ಅಧಿಕಾರಿಗಳು, ನೌಕರರ ವಿರುದ್ಧದ ಸುಮಾರು 67 ಶಿಸ್ತುಕ್ರಮ ಕಡತಗಳು ವಿಚಾರಣೆಯಾಗದೆ ಅಥವಾ ವಿಚಾರಣೆ ಆಗಿಯೂ ಇತ್ಯರ್ಥವಾಗದೇ ಕಳೆದ 5ರಿಂದ 7 ವರ್ಷಗಳ ಕಾಲ ಸಚಿವಾಲಯದಲ್ಲೇ ಬಾಕಿ ಇದ್ದವು. ಪ್ರಸ್ತುತ ಆ ಎಲ್ಲಾ ಕಡತಗಳನ್ನೂ ವಿಲೇವಾರಿ ಮಾಡಲಾಗಿದೆ.

ಪ್ರಸ್ತುತ 67 ಪ್ರಕರಣಗಳ ಪೈಕಿ ತಹಶೀಲ್ದಾರ್​ 30, ಗ್ರಾಮ ಆಡಳಿತ ಅಧಿಕಾರಿ 12, ಉಪ ನೋಂದಣಿ ಅಧಿಕಾರಿಗಳು 14, ಶಿರಸ್ತೇದಾರ್ 04, ರಾಜಸ್ವ ನಿರೀಕ್ಷಕರು 01, ಪ್ರಥಮ ದರ್ಜೆ ಸಹಾಕರು 02, ದ್ವಿತೀಯ ದರ್ಜೆ ಸಹಾಯಕರು 1, ಕೇಂದ್ರ ಸ್ಥಾನಿಕ ಸಹಾಯಕರು 01, ಜಿಲ್ಲಾ ನೋಂದಾಣಾಧಿಕಾರಿ 01 ಪ್ರಕರಣಗಳು ಒಳಗೊಂಡಿವೆ. ಈ ಪ್ರಕರಣಗಳ ಪೈಕಿ ತಪ್ಪಿತಸ್ಥರು ಎಂದು ಸಾಬೀತಾಗಿರುವ 2 ಅಧಿಕಾರಿ/ನೌಕರರಿಗೆ ಕಡ್ಡಾಯ ನಿವೃತ್ತಿ ಶಿಕ್ಷೆ ಜಾರಿಗೊಳಿಸಲಾಗಿದೆ. ಲೋಕಾಯುಕ್ತ ತನಿಖಾ ವರದಿ ಶಿಫಾರಸಿನಂತೆ 18 ಪ್ರಕರಣಗಳಲ್ಲಿ ನೌಕರರ ಮೇಲಿನ ಆರೋಪಗಳು ಸಾಬೀತಾಗದ ಕಾರಣ, ಅವರನ್ನು ಪ್ರಕರಣದಿಂದ ಖುಲಾಸೆಗೊಳಿಸಲಾಗಿದೆ.

ಶೇ.10ರಿಂದ ಶೇ.50ರವರೆಗೆ ನಿವೃತ್ತಿ ವೇತನ ಕಡಿತಗೊಳಿಸುವ ಶಿಕ್ಷೆ:ಒಂಬತ್ತು ಮಂದಿ ಅಧಿಕಾರಿಗಳಿಗೆ 1ರಿಂದ 4ರ ವರೆಗೆ ವಾರ್ಷಿಕ ವೇತನ, ಬಡ್ತಿಗಳನ್ನು ಕಡಿತಗೊಳಿಸುವ ಶಿಕ್ಷೆ ನೀಡಲಾಗಿದೆ. ಶಿಸ್ತುಕ್ರಮ ಜರುಗಿಸುವ ಮುನ್ನವೇ ನಿವೃತ್ತಿಗೊಂಡಿರುವ 13 ಮಂದಿ ಅಧಿಕಾರಿ/ನೌಕರರಿಗೆ ನಿವೃತ್ತಿ ವೇತನದಲ್ಲಿ ಶೇ.10ರಿಂದ ಶೇ.50ರ ವರೆಗೆ ನಿವೃತ್ತಿ ವೇತನ ಕಡಿತಗೊಳಿಸುವ ಶಿಕ್ಷೆ ನೀಡಲಾಗಿದೆ. ಇನ್ನಿತರ ಅಧಿಕಾರಿ/ನೌಕರರಿಗೆ ಸಿಸಿಎ ನಿಯಮ 1957-8(8) ರಲ್ಲಿ ವಿವರಿಸಿರುವ ಇನ್ನಿತರ ದಂಡನೆಗಳನ್ನು ವಿಧಿಸಲಾಗಿರುತ್ತದೆ.

ಇಲಾಖೆಯಲ್ಲಿ ಕೆಲವು ಭ್ರಷ್ಟ ಅಧಿಕಾರಿಗಳು ಹಾಗೂ ನೌಕರರೂ ಇದ್ದಾರೆ ಎಂಬ ವಿಚಾರವನ್ನು ತಳ್ಳಿಹಾಕುವಂತಿಲ್ಲ. ಆದರೆ, ಕಾಂಗ್ರೆಸ್ ಸರ್ಕಾರ ಚುನಾವಣೆಗೆ ಮುನ್ನ ನೀಡಿದ ಮಾತಿನಂತೆ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ, ಜನರಿಗೆ ಶುದ್ಧ ಮತ್ತು ಭ್ರಷ್ಟಾಚಾರ ರಹಿತ ಆಡಳಿತ ನೀಡಲು ಬದ್ಧವಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಕಳೆದ ಎರಡು ತಿಂಗಳ ಅವಧಿಯಲ್ಲಿ ಇಲಾಖೆಯಲ್ಲಿ ಸಾಕಷ್ಟು ಸುಧಾರಣಾ ಕ್ರಮಗಳನ್ನು ತರಲಾಗಿದೆ. ಅಧಿಕಾರಿ ವಲಯವನ್ನು ಚುರುಕು ಮುಟ್ಟಿಸಲಾಗಿದೆ. ಅಲ್ಲದೆ, ಹಲವಾರು ವರ್ಷಗಳಿಂದ ಬಾಕಿ ಇದ್ದ ತಪ್ಪಿತಸ್ಥ ಅಧಿಕಾರಿಗಳ ಪ್ರಕರಣವನ್ನು ಇತ್ಯರ್ಥಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:ಮುಂದೆ ಪಕ್ಷ ನೀಡುವ ಯಾವುದೇ ಜವಾಬ್ದಾರಿಯನ್ನು ಕಾಯಾ ವಾಚಾ ಮನಸಾದಿಂದ ನಿರ್ವಹಿಸುವೆ: ಸಿ ಟಿ ರವಿ

ABOUT THE AUTHOR

...view details