ಕರ್ನಾಟಕ

karnataka

ರಾಜ್ಯದಲ್ಲಿ ಮುಂಗಾರು ಕ್ಷೀಣ, ಸಾಧಾರಣ ಮಳೆ ಮುಂದುವರಿಕೆ: ಹವಾಮಾನ ಇಲಾಖೆ

By

Published : Jul 20, 2022, 11:54 AM IST

ಕರ್ನಾಟಕದಲ್ಲಿ ನಿರಂತರ ಮಳೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದೆ. ಸದ್ಯ ಮೀನುಗಾರರಿಗೆ ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

monsoon-become-weak-in-karnataka-moderate-rains-to-continue
ರಾಜ್ಯದಲ್ಲಿ ಮುಂಗಾರು ಕ್ಷೀಣ, ಸಾಧಾರಣ ಮಳೆ ಮುಂದುವರಿಕೆ: ಹವಾಮಾನ ಇಲಾಖೆ

ಬೆಂಗಳೂರು: ಜುಲೈ ತಿಂಗಳ ಮೊದಲ ವಾರದಿಂದ ರಾಜ್ಯದಲ್ಲಿ ಎಡೆಬಿಡದೆ ಸುರಿಯುತ್ತಿದ್ದ ಮುಂಗಾರು ಮಳೆ ಕೊನೆಗೂ ಬಿಡುವು ಕೊಟ್ಟಿದೆ. ಮುಂದಿನ 4 ದಿನ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮಂಗಳವಾರ ಹಲವೆಡೆ ಚದುರಿದಂತೆ ಸಾಧಾರಣ ಮಳೆಯಾಗಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಜುಲೈ 1ರಿಂದ ಜುಲೈ 19ರವರೆಗೆ ರಾಜ್ಯಾದ್ಯಂತ 365 ಮಿ.ಮೀ. ಮಳೆಯಾಗಬೇಕಿತ್ತು. ಆದರೆ, 462 ಮಿ.ಮೀ. ಮಳೆಯಾಗಿದೆ. ವಾಡಿಕೆಗಿಂತ ಶೇ.27ರಷ್ಟು ಹೆಚ್ಚು ಮಳೆ ಬಿದ್ದಿದೆ. ದಕ್ಷಿಣ ಒಳನಾಡಿನಲ್ಲಿ ಶೇ.76, ಉತ್ತರ ಒಳನಾಡಿನಲ್ಲಿ ಶೇ.21, ಮಲೆನಾಡಿನಲ್ಲಿ ಶೇ.25 ಹಾಗೂ ಕರಾವಳಿಯಲ್ಲಿ ಶೇ.21 ವಾಡಿಕೆಗಿಂತ ಹೆಚ್ಚು ಮಳೆ ಸುರಿದಿದೆ ಎಂದು ಇಲಾಖೆ ತಿಳಿಸಿದೆ.

ಕರ್ನಾಟಕದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದೆ. ಜುಲೈ 1ರಿಂದ ಮಳೆಯ ವಿಕೋಪಕ್ಕೆ ಸಿಲಿಕಾನ್ ಸಿಟಿ ಜನರು ತತ್ತರಿಸಿದ್ದಾರೆ. ತುಂತುರು ಮಳೆಯ ಮಧ್ಯೆ ತಣ್ಣಗೆ ಬೀಸುವ ಗಾಳಿಯು ಜನರು ನೆಗಡಿ, ಶೀತ, ಜ್ವರ ಸೇರಿದಂತೆ ಅನಾರೋಗ್ಯಕ್ಕೆ ತುತ್ತಾಗುವಂತೆ ಮಾಡಿದೆ.

ಇದನ್ನೂ ಓದಿ:ನೀರು ನಿಂತು ಕೊಳೆತೋಯ್ತು ಮೆಣಸು, ಮಳೆರಾಯನ ಮೇಲೆ ಅನ್ನದಾತನ ಮುನಿಸು

ABOUT THE AUTHOR

...view details