ಬೆಂಗಳೂರು: ಕಳ್ಳತನ ಪ್ರಕರಣದ ಆರೋಪಿಗಳನ್ನು ಹಿಡಿಯಲು ಹೋದ ಪೊಲೀಸ್ ತಂಡದ ಮೇಲೆಯೇ ಆರೋಪಿಗಳ ಸಹಚರರು ಹಲ್ಲೆ ಮಾಡಿದ್ದಾರೆ.
ಬಂಧಿಸಲು ಹೋದ ಪೊಲೀಸರ ಮೇಲೆಯೇ ಆರೋಪಿಗಳ ಸಹಚರರಿಂದ ಹಲ್ಲೆ!: ವಿಡಿಯೋ
ಪೊಲೀಸರು ಎಂದು ಹೇಳಿದರೂ ಮಾತಿನ ಚಕಮಕಿ ನಡೆಸಿ, ನಡುರಸ್ತೆಯಲ್ಲಿ ತಳ್ಳಾಟ ನಡೆಸಿದ್ದಾರೆ. ಈ ವೇಳೆ, ಪಿಎಸ್ಐ ಸಂತೋಷ್, ಎಸ್ಐ ರವಿಕುಮಾರ್ಗೆ ಸಣ್ಣಪುಟ್ಟ ಗಾಯಗಳಾಗಿ ಆಸ್ಪತ್ರೆಯಲ್ಲಿ ಹೊರ ರೋಗಿಗಳಾಗಿ ಚಿಕಿತ್ಸೆ ಪಡೆದು, ಡಿಸ್ಚಾರ್ಜ್ ಆಗಿದ್ದಾರೆ.
![ಬಂಧಿಸಲು ಹೋದ ಪೊಲೀಸರ ಮೇಲೆಯೇ ಆರೋಪಿಗಳ ಸಹಚರರಿಂದ ಹಲ್ಲೆ!: ವಿಡಿಯೋ ಕಳ್ಳರನ್ನು ಅರೆಸ್ಟ್ ಮಾಡಲು ಹೋದ ಪೊಲೀಸರ ಮೇಲೆಯೇ ಹಲ್ಲೆ](https://etvbharatimages.akamaized.net/etvbharat/prod-images/768-512-9673047-thumbnail-3x2-bin.jpg)
ವಿಜಯನಗರ, ಕಾಮಾಕ್ಷಿಪಾಳ್ಯ ಹಾಗೂ ಮಾಗಡಿ ರೋಡ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಬಂಧಿಸಲು ಕಾಮಾಕ್ಷಿಪಾಳ್ಯ ಠಾಣೆಯ ಪಿಎಸ್ಐ ಸಂತೋಷ್ ನೇತೃತ್ವದ ತಂಡ ಧಾರವಾಡಕ್ಕೆ ಹೋಗಿತ್ತು. ಈ ವೇಳೆ, ಮೂರು ಮಂದಿ ಆರೋಪಿಗಳನ್ನು ಬಂಧಿಸುವಾಗ ಖದೀಮರ ಸಹಚರರು ಬಂಧನಕ್ಕೆ ಅಡ್ಡಿ ಪಡಿಸಿದ್ದಾರೆ.
ಪೊಲೀಸರು ಎಂದು ಹೇಳಿದರೂ ಮಾತಿನ ಚಕಮಕಿ ನಡೆಸಿ, ನಡುರಸ್ತೆಯಲ್ಲಿ ತಳ್ಳಾಟ ನಡೆಸಿದ್ದಾರೆ. ಈ ವೇಳೆ, ಪಿಎಸ್ಐ ಸಂತೋಷ್, ಎಸ್ಐ ರವಿಕುಮಾರ್ಗೆ ಸಣ್ಣಪುಟ್ಟ ಗಾಯಗಳಾಗಿ ಆಸ್ಪತ್ರೆಯಲ್ಲಿ ಹೊರ ರೋಗಿಗಳಾಗಿ ಚಿಕಿತ್ಸೆ ಪಡೆದು, ಡಿಸ್ಚಾರ್ಜ್ ಆಗಿದ್ದಾರೆ. ಈ ಬಗ್ಗೆ ಸಂತೋಷ್ ದೂರು ದಾಖಲಿಸಿದ್ದಾರೆ.