ಬೆಂಗಳೂರು: ಶಿವರಾಮ ಕಾರಂತ್ ಬಡಾವಣೆ ಸ್ಥಗಿತಗೊಳ್ಳುವುದಿಲ್ಲ. ಜನ ತಪ್ಪು ಮಾಹಿತಿಗೆ ಕಿವಿಕೊಡಬಾರದು. ಆದಷ್ಟು ಬೇಗ ದಾಖಲೆಗಳನ್ನು ನೀಡಬೇಕು. ಎಪ್ರಿಲ್ 30 ದಾಖಲೆಗಳನ್ನು ಸಲ್ಲಿಸಲು ಕೊನೆಯ ದಿನ ಎಂದು ನಿವೃತ್ತ ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್ ಮಾಹಿತಿ ನೀಡಿದ್ದಾರೆ.
ಸುಪ್ರೀಂಕೋರ್ಟ್ ಆದೇಶದಂತೆ 03-08-2018ರ ಮೊದಲು ನಿರ್ಮಾಣವಾದ ಕಟ್ಟಡಗಳ ಮಾಹಿತಿ, ದಾಖಲೆ ಪಡೆಯಲು ಸುಪ್ರೀಂಕೋರ್ಟ್ ಸಮಿತಿ ರಚಿಸಿದ್ದು, ದಾಖಲೆಗಳನ್ನು ಪಡೆದು ಪರಿಶೀಲಿಸಿ ಸುಪ್ರೀಂಕೋರ್ಟ್ಗೆ ವರದಿ ನೀಡಬೇಕಿದೆ. ಆದರೆ ಜನಗಳಿಗೆ ಕೆಲವರ ಮಾಹಿತಿಯಿಂದ ಗೊಂದಲ ಉಂಟಾಗಿ ನಿರೀಕ್ಷಿತ ಪ್ರಮಾಣದಲ್ಲಿ ಮಾಹಿತಿ ಕೊಡುತ್ತಿಲ್ಲ.
ಕೋಡಿಹಳ್ಳಿ ಚಂದ್ರಶೇಖರ್ ಈ ಲೇಔಟ್ ಸ್ಥಗಿತಗೊಂಡಿದೆ. ಮುಖ್ಯಮಂತ್ರಿಗಳು ಆಶ್ವಾಸನೆಯನ್ನೂ ಕೊಟ್ಟಿದ್ದಾರೆ ಎಂದು ಸುಳ್ಳು ಹೇಳಿಕೊಂಡು ಬಂದಿದ್ದಾರೆ. ಈ ರೀತಿ ಭಿತ್ತಿಪತ್ರ ಅಂಟಿಸಿರುವುದರಿಂದ ಜನರಿಗೆ ಗೊಂದಲ ಉಂಟಾಗಿ ಹೆಚ್ಚು ಮಾಹಿತಿ ಕೊಡುತ್ತಿಲ್ಲ. ಈ ಬಗ್ಗೆ ರೈತ ಮುಖಂಡರಿಗೂ ನೋಟಿಸ್ ಕೊಡಲಾಗಿದೆ ಎಂದು ತಿಳಿಸಿದರು.