ಕರ್ನಾಟಕ

karnataka

ಬೆಂಗಳೂರು: ಪೋಷಕರು ಬೈದರೆಂದು ಶಾಲಾ ಬಾಲಕ ಆತ್ಮಹತ್ಯೆ

By

Published : Nov 12, 2022, 12:52 PM IST

ಕ್ಷುಲ್ಲಕ ಕಾರಣಕ್ಕೆ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಶಾಲಾ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

school boy commits suicide
ಶಾಲಾ ಬಾಲಕ ಆತ್ಮಹತ್ಯೆ

ಬೆಂಗಳೂರು: ಪೋಷಕರು ಬೈದರು ಎಂಬ ಕ್ಷುಲ್ಲಕ ಕಾರಣಕ್ಕೆ ಶಾಲಾ ಬಾಲಕನೊಬ್ಬ ಶುಕ್ರವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ. ಸಾಯಿ ಕುಮಾರ್ (13) ಆತ್ಮಹತ್ಯೆ ಮಾಡಿಕೊಂಡಿರುವ ಬಾಲಕ.

ಈತ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಮನೆ ಕೆಲಸ ಮಾಡುವ ವಿಚಾರಕ್ಕೆ ಕೋಪಗೊಂಡು ಮನೆಯ ಟೆರಸ್ ಮೇಲೆ ಹೋಗಿ ಕತ್ತಿಗೆ ಹಗ್ಗ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಈಟಿವಿ ಭಾರತಕ್ಕೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ನಾಲ್ಕನೇ ಮಗುವೂ ಹೆಣ್ಣೆಂದು ನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ತಂದೆ!

ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಈ ಕುರಿತು ಹೆಚ್ಚಿನ ತನಿಖೆ ಕೈಗೊಳ್ಳಲಾಗುತ್ತಿದೆ.

ಇದನ್ನೂ ಓದಿ:ಹಲ್ಲೆ ಮಾಡ್ತಾಳೆ ಹೆಂಡ್ತಿ, ಅಯ್ಯೋ ಕಾಪಾಡಿ ಸಾರ್.. ಪ್ರಧಾನಿ ಕಚೇರಿಗೆ ಬೆಂಗಳೂರು ವ್ಯಕ್ತಿ ದೂರು

ABOUT THE AUTHOR

...view details