ಕರ್ನಾಟಕ

karnataka

'ಯಾರು ಹೊಣೆ ಮೋದಿಯವರೇ?': ಪ್ರಧಾನಿಗೆ ಕೆಲವು ಪ್ರಶ್ನೆ ಕೇಳಿದ ಸಿದ್ದರಾಮಯ್ಯ

By

Published : May 7, 2023, 2:17 PM IST

ಬೆಂಗಳೂರಿನಲ್ಲಿ ನಿನ್ನೆ ಮತ್ತು ಇಂದು ರೋಡ್ ಶೋ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಲವು ಪ್ರಶ್ನೆಗಳನ್ನು ಕೇಳಿದ್ದು, ಇದಕ್ಕೆಲ್ಲ ಯಾರು ಹೊಣೆ? ಎಂದಿದ್ದಾರೆ.

siddaramaiah
ಸಿದ್ದರಾಮಯ್ಯ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ ಕೆಲ ಪ್ರಶ್ನೆಗಳನ್ನು ಕೇಳಿದ್ದಾರೆ. ಯಾರು ಹೊಣೆ ನರೇಂದ್ರ ಮೋದಿ ಅವರೇ? ಎಂಬ ವಿಚಾರ ಮುಂದಿಟ್ಟು ಹಲವು ಪ್ರಶ್ನೆಗಳನ್ನು ಸಾಮಾಜಿಕ ಜಾಲತಾಣದ ಮೂಲಕ ಕೇಳಿದ್ದಾರೆ. ಪ್ರಶ್ನೆಗಳು ಈ ಕೆಳಗಿನಂತಿವೆ.

ಮೋದಿಗೆ ಪ್ರಶ್ನೆ ಕೇಳಿದ ಸಿದ್ದರಾಮಯ್ಯ

ಪ್ರಧಾನ ಮಂತ್ರಿಯವರು ಕರ್ನಾಟಕದಲ್ಲಿಯೇ ಠಿಕಾಣಿ ಹೂಡಿ ಬಾಯ್ತುಂಬ ಮಾತನಾಡುತ್ತಿದ್ದಾರೆ. ಆದರೆ, ಗುತ್ತಿಗೆದಾರರ ಸಂಘದ ಅಧ್ಯಕ್ಷರು ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷರು ಪ್ರಧಾನಿಗಳಿಗೇ ಪತ್ರ ಬರೆಯುವಷ್ಟು ಭ್ರಷ್ಟಾಚಾರ ತಾರಕಕ್ಕೇರಿದೆ. ಕಾಂಗ್ರೆಸ್ ಸರ್ಕಾರದ ಕಾಲದಲ್ಲಿ ಬೆಂಗಳೂರು ನಗರ ಉದ್ಯಾನಗಳ ನಗರ, ಸಿಲಿಕಾನ್ ಸಿಟಿ, ಐಟಿ-ಬಿಟಿ ರಾಜಧಾನಿ, ಸ್ಟಾರ್ಟ್ಅಪ್ ರಾಜಧಾನಿ ಎಂದೆಲ್ಲ ಖ್ಯಾತಿ ಗಳಿಸಿತ್ತು. ಬಿಜೆಪಿ ಸರ್ಕಾರದ ಕಾಲದಲ್ಲಿ ಗುಂಡಿಬಿದ್ದ ರಸ್ತೆಗಳು, ನೆರೆ ನೀರಿನಲ್ಲಿ ಮುಳುಗುವ ಮನೆಗಳು, ಅಪರಾಧಿಗಳ ಜಗತ್ತಿನ ರಾಜಧಾನಿ ಎಂಬ ಕುಖ್ಯಾತಿ ಗಳಿಸಿದೆ.

ಮೋದಿಗೆ ಪ್ರಶ್ನೆ ಕೇಳಿದ ಸಿದ್ದರಾಮಯ್ಯ

ಕಾಂಗ್ರೆಸ್ ಸರ್ಕಾರದ ಕಾಲದಲ್ಲಿ ಬೆಂಗಳೂರು ನಗರ ಉದ್ಯಮಶೀಲರ ಆಸಕ್ತಿಯ ನಂಬರ್ ಒನ್ ತಾಣವಾಗಿತ್ತು. ಬಿಜೆಪಿ ಸರ್ಕಾರದ ಕಾಲದಲ್ಲಿ ಬೆಂಗಳೂರು ನಗರ ಉದ್ಯಮಶೀಲರ ಆಸಕ್ತಿಯ ನಗರಗಳ ಪಟ್ಟಿಯಲ್ಲಿ ಹದಿನೇಳನೇ ಸ್ಥಾನಕ್ಕೆ ಕುಸಿದಿದೆ. ಅಪರಾಧ ಸಂಖ್ಯೆಗಳ ಹೆಚ್ಚಳ, ಕುಸಿದು ಬಿದ್ದಿರುವ ಮೂಲಸೌಕರ್ಯ ವ್ಯವಸ್ಥೆ ಮತ್ತು ಗುಂಡಿಬಿದ್ದ ರಸ್ತೆಗಳಿಂದಾಗಿ ಜಾಗತಿಕ ವಾಸಯೋಗ್ಯ ಸೂಚ್ಯಂಕದಲ್ಲಿ ಬೆಂಗಳೂರು ಕನಿಷ್ಠ ಶ್ರೇಣಿಗೆ ತಲುಪಿದೆ.

ಮೋದಿಗೆ ಪ್ರಶ್ನೆ ಕೇಳಿದ ಸಿದ್ದರಾಮಯ್ಯ

ಕಳೆದ ಮೂರು ವರ್ಷಗಳಲ್ಲಿ ಕೇವಲ ಗುಂಡಿಬಿದ್ದ ರಸ್ತೆಗಳಿಂದಾಗಿ 31 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಬಿಬಿಎಂಪಿ ಕೇವಲ ರಸ್ತೆಗುಂಡಿ ಮುಚ್ಚಲು ರೂ.7,121 ಖರ್ಚು ಮಾಡಿದರೂ ಇನ್ನೂ ನೂರಾರು ಹಳೆಯ ಗುಂಡಿಗಳು ಉಳಿದಿವೆ, ಹೊಸ ಗುಂಡಿಗಳು ತಯರಾಗುತ್ತಿವೆ. ಶೇಕಡಾ 48ರಷ್ಟು ವಾಹನದಟ್ಟಣೆಯ ಪ್ರಮಾಣದಿಂದಾಗಿ ಬೆಂಗಳೂರು ನಗರ ದೇಶದಲ್ಲಿ ಎರಡನೇ ಅತ್ಯಂತ ಹೆಚ್ಚು ವಾಹನ ದಟ್ಟಣೆಯ ನಗರ ಎಂಬ ಕುಖ್ಯಾತಿಗೆ ಒಳಪಟ್ಟಿದೆ. ಇದರಿಂದಾಗಿ ನಗರವಾಸಿಗಳು ಮನೆಗಿಂತ ಹೆಚ್ಚಿನ ಸಮಯ ರಸ್ತೆಯಲ್ಲಿ ಕಳೆಯುವಂತಾಗಿದೆ.

ಮೋದಿಗೆ ಪ್ರಶ್ನೆ ಕೇಳಿದ ಸಿದ್ದರಾಮಯ್ಯ

ಇದನ್ನೂ ಓದಿ :ಮೋದಿ‌ ರೋಡ್ ಶೋ‌ದಿಂದ ಯಾವುದೇ ಪ್ರಯೋಜನವಿಲ್ಲ : ಹೆಚ್​.ಡಿ.ದೇವೇಗೌಡ

ಎನ್.ಸಿ.ಆರ್.ಬಿ ವರದಿ ಪ್ರಕಾರ, ದೇಶದ ಮೆಟ್ರೋಪಾಲಿಟನ್ ನಗರಗಳಲ್ಲಿ ನಡೆಯುವ ಅಪರಾಧಗಳ ಪೈಕಿ 72% ಕಳ್ಳತನಗಳು ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ಕಾರಣ ಬೆಂಗಳೂರು ನಗರ ಈಗ ಅಪರಾಧಗಳ ತಾಣವಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೇಲಿನ ದೌರ್ಜನ್ಯ ಪ್ರಮಾಣ 2021ರಲ್ಲಿ ಶೇಕಡಾ 18ರಷ್ಟು ಹೆಚ್ಚಾಗಿದೆ. ಎನ್.ಡಿ.ಪಿ.ಎಸ್ ಕಾಯ್ದೆಯಡಿ ದಾಖಲಾಗುತ್ತಿರುವ ಪ್ರಕರಣಗಳ ಸಂಖ್ಯೆ 14.93% ರಷ್ಟು ಹೆಚ್ಚಾಗಿವೆ. 2021ರಲ್ಲಿ ಇಮ್ಮೊರಲ್ ಟ್ರಾಫಿಕಿಂಗ್ ಶೇಕಡಾ 61 ರಷ್ಟು ಹೆಚ್ಚಾಗಿದೆ.

ಮೋದಿಗೆ ಪ್ರಶ್ನೆ ಕೇಳಿದ ಸಿದ್ದರಾಮಯ್ಯ

ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಸಲು ರೂಪಿಸಲಾಗಿರುವ ಮೇಕೆದಾಟು ಯೋಜನೆಗೆ ಅನುಮತಿ ನೀಡದೆ ಇರುವ ಕಾರಣದಿಂದಾಗಿ ನಗರದಲ್ಲಿ ಕುಡಿಯುವ ನೀರಿನ ಕೊರತೆ ಹೆಚ್ಚಾಗುತ್ತಿದೆ. ನಗರದ ಜನ ಕುಡಿಯುವ ನೀರಿಗಾಗಿ ಖಾಸಗಿ ಬೋರ್ ವೆಲ್ ಮತ್ತು ಟ್ಯಾಂಕರ್ ನೀರನ್ನು ಬಳಸುತ್ತಿದ್ದಾರೆ. ನಿನ್ನೆ ಹಾಗೂ ಇಂದು ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವೆಡೆ ಮೋದಿ ಬಿಜೆಪಿ ಪರ ಪ್ರಚಾರ ನಡೆಸುತ್ತಿದ್ದಾರೆ. ಈ ಸಂದರ್ಭ ಸಿದ್ದರಾಮಯ್ಯ ಸರಣಿ ಪ್ರಶ್ನೆಗಳನ್ನು ಪ್ರಧಾನಿ ಮೋದಿಗೆ ಕೇಳಿದ್ದಾರೆ.

ಮೋದಿಗೆ ಪ್ರಶ್ನೆ ಕೇಳಿದ ಸಿದ್ದರಾಮಯ್ಯ

ABOUT THE AUTHOR

...view details