ಬೆಂಗಳೂರು:ಕೊರೊನಾ ಕಾರಣಕ್ಕೆ ರಾಜ್ಯದಲ್ಲಿ ಮೊದಲ ಬಾರಿಗೆ ಎಸ್ಎಸ್ಎಲ್ಸಿ ಪ್ರಶ್ನೆ ಪತ್ರಿಕೆ ಮಾದರಿಯನ್ನೇ ಬದಲಾಯಿಸುವ ಮೂಲಕ ಪರೀಕ್ಷೆ ನಡೆಸಲಾಗಿತ್ತು. ಇಂದು ಮಧ್ಯಾಹ್ನ 3.30ಕ್ಕೆ ಫಲಿತಾಂಶ ಪ್ರಕಟವಾಗಲಿದೆ.
ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಸಭೆ: ಫಲಿತಾಂಶ ಪ್ರಕಟಿಸುವ ವಿಚಾರ ಕುರಿತು ನಿನ್ನೆ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ನೇತೃತ್ವದಲ್ಲಿ ಸಭೆ ನಡೆದಿತ್ತು. ಈ ಸಭೆಯಲ್ಲಿ ಇಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸುವ ನಿರ್ಧಾರಕ್ಕೆ ಬರಲಾಗಿತ್ತು. ಈ ಹಿಂದೆಯೇ ಆಗಸ್ಟ್ 10ರೊಳಗೆ ಫಲಿತಾಂಶ ಪ್ರಕಟಿಸುವುದಾಗಿ ಈ ಹಿಂದಿನ ಶಿಕ್ಷಣ ಸಚಿವರಾಗಿದ್ದ ಎಸ್.ಸುರೇಶ್ ಕುಮಾರ್ ತಿಳಿಸಿದ್ದರು.
ಎಸ್ಎಸ್ಎಲ್ಸಿ ಪರೀಕ್ಷೆ ಪ್ರಕಟಿಸಲು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಜೂನ್ 19-22 ರಂದು ಪರೀಕ್ಷೆ ನಡೆದಿದ್ದು, ಶೇ 99.65 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.