ಬೆಂಗಳೂರು: ದೇಶದಲ್ಲಿ ಕೊರೊನಾ ಭೀತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಕುರಿತು ಎಲ್ಲಾ ರಾಜ್ಯಗಳ ಜೊತೆ ವಿಡಿಯೋ ಸಂವಾದ ನಡೆಸುತ್ತಿರುವ ಕೇಂದ್ರ ಆರೋಗ್ಯ ಇಲಾಖೆ ಇಂದು ರಾಜ್ಯದ ತಂಡದ ಜೊತೆ ವಿಡಿಯೋ ಸಂವಾದ ನಡೆಸಿ ಮಾಹಿತಿ ವಿನಿಮಯ ಮಾಡಿಕೊಂಡಿತು.
ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ ನಿರ್ದೇಶನದಂತೆ ಕೇಂದ್ರದ ಆರೋಗ್ಯ ಇಲಾಖೆ ಅಧಿಕಾರಿಗಳು ಇಂದು ರಾಜ್ಯದ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿದರು. ವಿಕಾಸಸೌಧದಲ್ಲಿ ನಡೆದ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು, ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಭಾಗಿಯಾಗಿದ್ದರು.
ಇದನ್ನು ಓದಿ:ಬೆಂಗಳೂರಿನಲ್ಲಿ ಓರ್ವ ವ್ಯಕ್ತಿಗೆ ಕೊರೊನಾ ಸೋಂಕು... 5ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ರಜೆ!
ಸಂವಾದ ಆರಂಭಗೊಳ್ಳುತ್ತಿದ್ದಂತೆ ಕೊರೊನಾ ವೈರಸ್ ಹರಡದ ರೀತಿ ರಾಜ್ಯ ಆರೋಗ್ಯ ಇಲಾಖೆ ಮಾಡಿಕೊಂಡಿರುವ ಕ್ರಮದ ಬಗ್ಗೆ ಚರ್ಚೆ ನಡೆಸಲಾಯಿತು. ನಂತರ ವೈರಸ್ ತಡೆಗೆ ಮತ್ತಷ್ಟು ಎಚ್ಚರಿಕೆ ಕ್ರಮ ಜಾರಿ ಮಾಡುವ ಬಗ್ಗೆ ಗಂಭೀರ ಸಮಾಲೋಚನೆ ನಡೆಸಲಾಯಿತು.