ಬೆಳಗಾವಿ: ಬೆಳಕಿನ ಹಬ್ಬ ದೀಪಾವಳಿ ಅಂಗವಾಗಿ ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡಕ್ಕೆ ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುಟುಂಬ ಸಮೇತವಾಗಿ ಭೇಟಿ ನೀಡಿದರು. ತಮ್ಮ ಕುಲದೇವತೆ ಆದಿಶಕ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಿ ದರ್ಶನಾಶೀರ್ವಾದ ಪಡೆದುಕೊಂಡರು.
ಎಣ್ಣೆಹೊಂಡ ಹಾಗೂ ಪರಶುರಾಮ ಮತ್ತು ಯಲ್ಲಮ್ಮ ದೇವಸ್ಥಾನ ಪ್ರಾಂಗಣದಲ್ಲಿರುವ ದೇವಸ್ಥಾನಗಳಿಗೂ ಭೇಟಿ ನೀಡಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಎಲ್ಲರ ಅಮ್ಮ ಯಲ್ಲಮ್ಮ ದೇವಿ ದರ್ಶನ ಪಡೆದು, ನಾಡಿನ ಜನರ ಒಳಿತಿಗಾಗಿ ಪ್ರಾರ್ಥಿಸಿದ್ದೇನೆ. ದೀಪಾವಳಿ ಎಲ್ಲರ ಬಾಳಲ್ಲೂ ಬೆಳಕು ಮೂಡಿಸಲಿ ಎಂದು ಆಶಿಸಿದರು.