ಬೆಳಗಾವಿ:ಕೊರೊನಾ ಸೋಂಕಿನಿಂದ ಗೋಕಾಕಿನ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕೊರೊನಾ ಜೊತೆಗೆ ರಮೇಶ್ ಜಾರಕಿಹೊಳಿ ದೇಹದಲ್ಲಿ ಮಧುಮೇಹ ಹಾಗೂ ರಕ್ತದೊತ್ತಡ ಹೆಚ್ಚಾಗಿತ್ತು. ಈ ಕಾರಣಕ್ಕೆ ಮೂರು ದಿನಗಳ ಹಿಂದೆ ಅವರು ಗೋಕಾಕಿನ ಸರ್ಕಾರಿ ಆಸ್ಪತ್ರೆಯ ಐಸಿಯು ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಅವರ ದೇಹದಲ್ಲಿ ಶುಗರ್ ಹಾಗೂ ಬಿಪಿ ಸಹಜ ಸ್ಥಿತಿಗೆ ಬಂದಿದ್ದು, ಮನೆಯಲ್ಲೇ ಕ್ವಾರಂಟೈನ್ ಆಗುವುದಾಗಿ ಹೇಳಿ ರಮೇಶ್ ಜಾರಕಿಹೊಳಿ ಬಿಡುಗಡೆ ಆಗಿದ್ದಾರೆ.