ಕರ್ನಾಟಕ

karnataka

ಕೊರೊನಾದಿಂದ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಗುಣಮುಖ

By

Published : Sep 8, 2020, 10:15 AM IST

ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಈ ಕುರಿತಂತೆ ಅವರು ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದಾರೆ.

Janaradana Reddy heald from Covid
ಜನಾರ್ಧನ ರೆಡ್ಡಿ

ಬಳ್ಳಾರಿ:ಕೊರೊನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಗುಣಮುಖರಾಗಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ನಾನು ಕಳೆದ ವಾರ ಕೊರೊನಾ ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದೆ. ಇಂದು ತಮ್ಮೆಲ್ಲರ ಶುಭ ಹಾರೈಕೆ ಹಾಗೂ ಆ ಭಗವಂತನ ಆಶೀರ್ವಾದದಿಂದ ಈಗ ಸೋಂಕಿನಿಂದ ಸಂಪೂರ್ಣ ಗುಣಮುಖನಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದೇನೆ. ಖಾಸಗಿ ಆಸ್ಪತ್ರೆಯಲ್ಲಿ ಅತ್ಯುತ್ತಮ ವೈದ್ಯರ ತಂಡ ಹಾಗೂ ವೈದ್ಯಕೀಯ ಸಿಬ್ಬಂದಿ ನೀಡಿದ ಅತ್ಯುತ್ತಮ ಚಿಕಿತ್ಸೆ ಹಾಗೂ ಅವರ ಕಾಳಜಿಯಿಂದ ಇಂದು ಸಂಪೂರ್ಣ ಗುಣಮುಖನಾಗಿದ್ದೇನೆ. ನನಗೆ ಉತ್ತಮ ಚಿಕಿತ್ಸೆ ನೀಡಿದ ಆಸ್ಪತ್ರೆಯ ಎಲ್ಲಾ ಸಿಬ್ಬಂದಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ತಮ್ಮ ಫೇಸ್​ಬುಕ್​ ಪೇಜ್​ನಲ್ಲಿ ಬರೆದುಕೊಂಡಿದ್ದಾರೆ.

ಜನಾರ್ಧನ ರೆಡ್ಡಿ ಫೇಸ್​ಬುಕ್​​ ಪೋಸ್ಟ್

ಕೊರೊನಾ ಸೋಂಕಿಗೆ ಒಳಗಾಗಿ ಆಸ್ಪತ್ರೆಯಲ್ಲಿ ದಾಖಲಾದ ಸಂದರ್ಭದಲ್ಲಿ ನನ್ನ ಆರೋಗ್ಯಕ್ಕಾಗಿ ಪ್ರಾರ್ಥಿಸಿದ ಎಲ್ಲಾ ಬಂಧುಗಳಿಗೆ, ಸ್ನೇಹಿತರಿಗೆ, ಹಿತೈಷಿಗಳಿಗೆ ಹಾಗೂ ಅಭಿಮಾನಿಗಳಿಗೆಲ್ಲರಿಗೂ ಅನಂತ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದಿದ್ದಾರೆ.

ABOUT THE AUTHOR

...view details