ಕರ್ನಾಟಕ

karnataka

ಬೀದರ್​:1.40 ಕೋಟಿ ರೂಪಾಯಿ ಮೌಲ್ಯದ 150 ಕೆಜಿ ಗಾಂಜಾ ವಶ

By

Published : Apr 10, 2023, 7:09 PM IST

ಬೀದರ್​ ಜಿಲ್ಲಾ ಪೊಲೀಸರು ಕಾರ್ಯಚರಣೆ ನಡೆಸಿ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ 150 ಗಾಂಜಾ ವಶಕ್ಕೆ ಪಡೆದು ಆರೋಪಿಗಳನ್ನು ಬಂಧಿಸಿದ್ದಾರೆ.

bidar-150-kg-ganja-worth-rs-1-dot-40-crore-seized
ಬೀದರ್​: 1.40 ಕೋಟಿ ರೂಪಾಯಿ ಮೌಲ್ಯದ 150 ಕೆಜಿ ಗಾಂಜಾ ವಶ

ಬೀದರ್​:ಗಡಿ ಜಿಲ್ಲೆ ಬೀದರ್​ನಲ್ಲಿಇಂದುಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಸುಮಾರು 1 ಕೋಟಿ 40 ಲಕ್ಷ ಮೌಲ್ಯದ 150 ಕೆಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ.

ಕಾರ್ಯಾಚರಣೆ ಬಗ್ಗೆ ಮಾಹಿತಿ ನೀಡಿದ ಐಜಿಪಿ ಅನುಪಮ್ ಅಗರವಾಲ್​,"ಸೋಮವಾರದಂದು ಔರಾದ ತಾಲೂಕಿನ ಏಕಂಬಾ ಚೆಕ್ ಪೋಸ್ಟ್ ಬಳಿ ತೆಲಂಗಾಣ ಹಾಗೂ ಬೀದರ್​ ಜಿಲ್ಲೆಯ ಇಬ್ಬರು ವ್ಯಕ್ತಿಗಳು ಸೇರಿ ಅಕ್ರಮವಾಗಿ ಗಾಂಜಾ ಸಾಗಣೆ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಔರಾದ್​ ತಾಲೂಕಿನ ವೃತ್ತ ಸಿಪಿಐ ಮಲ್ಲಿಕಾರ್ಜುನ ಇಕ್ಕಳಕಿ ನೇತೃತ್ವದ ತಂಡವು ಇಬ್ಬರು ಆರೋಪಿಗಳನ್ನು ಬಂಧಿಸಿ, 1 ಕೋಟಿ 30 ಲಕ್ಷ ಮೌಲ್ಯದ 130 ಕೆಜಿ ಗಾಂಜಾ, 2 ಲಕ್ಷ ನಗದು ಹಾಗೂ ಬೊಲೆರೋ ವಾಹನ, ಎರಡು ಮೊಬೈಲ್ ಪೋನ್​ಗಳನ್ನು ವಶಕ್ಕೆ ಪಡೆದು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ" ಎಂದು ಮಾಹಿತಿ ನೀಡಿದರು.

ಭಾನುವಾರ ನಡೆದ ಇನ್ನೊಂದು ಪ್ರಕರಣದಲ್ಲಿ ಬೀದರ್​ನಿಂದ ಹುಮನ್ನಾಬಾದ್​ಗೆ ಬಸ್ ಮೂಲಕ ಗಾಂಜಾ ಸಾಗಣೆ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಆರೋಪಿಯಿಂದ 10 ಲಕ್ಷ ಮೌಲ್ಯದ 20 ಕೆಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ ಬಂಧಿತ ಆರೋಪಿ ತೆಲಂಗಾಣ ಮೂಲದವನು ಎಂದು ಗುರುತಿಸಲಾಗಿದೆ ಎಂದರು. ಬೀದರ್​ ಜಿಲ್ಲೆಯು ತೆಲಂಗಾಣ ಹಾಗೂ ಮಹಾರಾಷ್ಟ್ರ ರಾಜ್ಯಗಳೊಂದಿಗೆ ತನ್ನ ಗಡಿ ಹಂಚಿಕೊಂಡಿದ್ದರಿಂದ ಇಲ್ಲಿಂದ ಮಾದಕ ವಸ್ತುಗಳು ಸಾಗಣೆ ಮಾಡುವ ಸಂಭವವಿದೆ ಆ ಹಿನ್ನೆಲೆಯಲ್ಲಿ ಜಿಲ್ಲೆಯ ಪೊಲೀಸರು ಅಕ್ರಮವಾಗಿ ಸಾಗಣೆ ಮಾಡುವ ಮಾದಕವಸ್ತುಗಳ ಮೇಲೆ ಹದ್ದಿನ ಕಣ್ಣಿಟ್ಟಿದೆ. ಇದರ ಫಲವಾಗಿ ಕಳೆದ ಮೂರು ತಿಂಗಳಿನಲ್ಲಿ 11 ಪ್ರಕರಣಗಳಲ್ಲಿ ಸುಮಾರು 800 ಕೆಜಿ ಗಾಂಜಾ ವಶಪಡಿಸಿಕೊಂಡು 34 ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್​ಎಲ್​ ಮಾತನಾಡಿ, "ಇತ್ತೀಚೆಗೆ ಜಿಲ್ಲೆಯಲ್ಲಿ ಮಾದಕ ವಸ್ತುಗಳ ಸಾಗಣೆ ಪ್ರಕರಣಗಳು ಹೆಚ್ಚಾಗಿವೆ. ಈ ಪ್ರಕರಣಗಳನ್ನು ಪೊಲೀಸ್ ಇಲಾಖೆಯು ಆಂತರಿಕ ಮಾಹಿತಿ ಪಡೆದು ಭೇದಿಸುತ್ತಿದೆ. ಈ ಹಿಂದೆ ಜಿಲ್ಲಾ ಪೊಲೀಸ್ ಇಲಾಖೆ ಸ್ಥಾಪಿಸಿದ್ದ ರೌಡಿ ನಿಗ್ರಹ ದಳದಂತೆ, ಮಾದಕ ವಸ್ತುಗಳ ನಿಗ್ರಹ ದಳವನ್ನು ಸ್ಥಾಪಿಸಲಾಗುವುದು ಈ ನಿಗ್ರಹ ದಳದಲ್ಲಿ ಹಿಂದೆ ಇದೇ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿದ ನುರಿತ ಅಧಿಕಾರಿಗಳು ಹಾಗೂ ಸಿಬ್ಬಂದಿ ನಿಯೋಜಿಸಲಾಗುವುದು. ಈ ನಿಗ್ರಹ ದಳದ ಜೊತೆಗೆ ನೆರೆಯ ರಾಜ್ಯ ಪೊಲೀಸರ ಸಹಕಾರ ಪಡೆದು ಮಾದಕ ವಸ್ತುಗಳ ಅಕ್ರಮ ಸಾಗಣೆಗೆ ಸಂಪರ್ಕಕ್ಕೆ ಕಡಿವಾಣ ಹಾಕಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಹೇಶ ಮೇಘಣ್ಣನವರ್​, ಸಹಾಯಕ ಪೊಲೀಸ್ ಅಧೀಕ್ಷಕ ಪೃತ್ವಿಕ್ ಶಂಕರ್​, ಔರಾದ್​ ತಾಲೂಕಿನ ಸಿಪಿಐ ಮಲ್ಲಿಕಾರ್ಜುನ ಇಕ್ಕಳಕಿ ಸೇರಿದಂತೆ, ಈ ಕಾರ್ಯಾಚರಣೆಯಲ್ಲಿ ಭಾಗಿಯಾದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಇದನ್ನೂ ಓದಿ:ಬೆಂಗಳೂರಿನಲ್ಲಿ ₹8 ಕೋಟಿ ಮೌಲ್ಯದ ಡ್ರಗ್ಸ್‌ ಪತ್ತೆ: ಐವರು ವಿದೇಶಿಗರ ಬಂಧನ

ABOUT THE AUTHOR

...view details