ಕರ್ನಾಟಕ

karnataka

ಬೀದರ್: ಹತ್ತಿ ಬೆಳೆ ಮಧ್ಯೆ ಗಾಂಜಾ ಬೆಳೆದ ಆರೋಪಿಯ ಬಂಧನ

By

Published : Aug 28, 2022, 8:55 AM IST

Bidar man arrested for growing marijuana
ಗಾಂಜಾ ಗಿಡಗಳನ್ನು ಬೆಳೆದ ಆರೋಪಿಯ ಬಂಧನ ()

ಜಮೀನಿನಲ್ಲಿ ಬೆಳೆಗಳ ಮಧ್ಯೆ ಗಾಂಜಾ ಗಿಡಗಳನ್ನು ಬೆಳೆದಿದ್ದ ಆರೋಪದ ಮೇಲೆ ಬೀದರ್ ಜಿಲ್ಲೆಯ ತುಳಸಿರಾಂ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.

ಬೀದರ್​​:ಹತ್ತಿ ಬೆಳೆ ಮಧ್ಯೆ ಗಾಂಜಾ ಗಿಡಗಳನ್ನು ಬೆಳೆದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೀದರ್ ಜಿಲ್ಲೆಯ ಚಿಂತಾಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕೀಶನ್ ತಾಂಡದಲ್ಲಿ ನಡೆದಿದೆ. ಔರಾದ ತಾಲೂಕಿನ ಚಿಕ್ಲಿ(ಜೆ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ತುಳಸಿರಾಂ ಬಂಧಿತ ಆರೋಪಿ.

ಗಾಂಜಾ ಗಿಡಗಳನ್ನು ಬೆಳೆದ ಆರೋಪಿಯ ಬಂಧನ

ಬೆಳೆಗಳ ಮಧ್ಯೆ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಔರಾದ್ ವೃತ್ತ ನಿರೀಕ್ಷಕ ಮಲ್ಲಿಕಾರ್ಜುನ ಇಕ್ಕಳಕಿ ಮಾರ್ಗದರ್ಶನದಲ್ಲಿ ಚಿಂತಾಕಿ ಪೊಲೀಸ್‌ ಠಾಣಾ ಪಿಎಸ್‌ಐ ಸಿದ್ದಲಿಂಗ ಹಾಗೂ ಅವರ ತಂಡ ದಾಳಿ ನಡೆಸಿತು. ಸುಮಾರು 15 ಕೆಜಿ ಗಾಂಜಾ ಗಿಡಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇದನ್ನೂ ಓದಿ:ಲಾರಿ ಅಡ್ಡಗಟ್ಟಿ ಹಣಕ್ಕೆ ಬೇಡಿಕೆ: ಬೆಳಗಾವಿಯಲ್ಲಿ ನಾಲ್ವರು ನಕಲಿ ಪತ್ರಕರ್ತರ ಬಂಧನ

ABOUT THE AUTHOR

...view details