ಕರ್ನಾಟಕ

karnataka

ಚಾಮರಾಜನಗರ: ನದಿಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಶವಪತ್ತೆ

By

Published : Sep 8, 2022, 6:04 PM IST

kn_cnr_01_

ಸುವರ್ಣಾವತಿ ನದಿಯಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯೊಬ್ಬರ ಮೃತದೇಹ ಜಮೀನೊಂದರಲ್ಲಿ ಪತ್ತೆಯಾಗಿದೆ.

ಚಾಮರಾಜನಗರ: ಮಹಾಮಳೆಗೆ ಜಿಲ್ಲೆಯಲ್ಲಿ ನಾಲ್ಕನೇ ಸಾವು ಸಂಭವಿಸಿದ್ದು, ಮಳೆ ನೀರಿನಲ್ಲಿ ಕೊಚ್ಚಿಹೋದ ವ್ಯಕ್ತಿಯೋರ್ವ ಶವವಾಗಿ ಪತ್ತೆಯಾಗಿರುವ ಘಟನೆ ಯಳಂದೂರು ತಾಲೂಕಿನ ಬೂದಿತಿಟ್ಟು ಗ್ರಾಮದ ಜಮೀನೊಂದರಲ್ಲಿ ನಡೆದಿದೆ.

ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ಮಂಜು(45) ಮೃತರು. ಕಳೆದ ಮಂಗಳವಾರ ಅಂಬಳೆ ಗ್ರಾಮದಿಂದ ತಮ್ಮ ಹೆಂಡತಿ ಊರು ಬೂದಿತಿಟ್ಟು ಗ್ರಾಮಕ್ಕೆ ತೆರಳುವಾಗ ಸುವರ್ಣಾವತಿ ನದಿ ನೀರಿನಲ್ಲಿ ಮಂಜು ಕೊಚ್ಚಿಕೊಂಡು ಹೋಗಿದ್ದರು. ನದಿ ನೀರಿನ ಹರಿವು ಕಡಿಮೆಯಾದ ಹಿನ್ನೆಲೆಯಲ್ಲಿ ನದಿ ಬಳಿಯ ಕಬ್ಬಿನ ಗದ್ದೆಯಲ್ಲಿ ಮೃತದೇಹ ಪತ್ತೆಯಾಗಿದೆ‌.

ಯಳಂದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಬಳಿಕ ವಾರಸುದಾರರಿಗೆ ಶವವನ್ನು ಒಪ್ಪಿಸಿದ್ದಾರೆ.

ಇದನ್ನೂ ಓದಿ:ಕರಾವಳಿ ಭಾಗದಲ್ಲಿ ಭಾರಿ ಮಳೆ: ಮೂರೂ ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್’ ಘೋಷಿಸಿದ ಹವಾಮಾನ ಇಲಾಖೆ

ABOUT THE AUTHOR

...view details