ಕರ್ನಾಟಕ

karnataka

ಆಟೋ, ಬೈಕ್ ನಡುವೆ ಡಿಕ್ಕಿ... ವಾಹನ ಸವಾರನ ತಲೆ ಛಿದ್ರ!

By

Published : Aug 12, 2019, 4:10 AM IST

ಆಟೋ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆಟೋ,ಬೈಕ್ ನಡುವೆ ಡಿಕ್ಕಿ

ಚಿಕ್ಕಬಳ್ಳಾಪುರ: ಆಟೋ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿಯ ಗೌಡಗೆರೆ ಗ್ರಾಮದ ತಿರುವಿನಲ್ಲಿ ನಡೆದಿದೆ.

ಗಂಗಣ್ಣ (32) ಮೃತ ದುರ್ದೈವಿ. ಆಟೋ ಮತ್ತು ಬೈಕ್​ ಡಿಕ್ಕಿಯಿಂದಾಗಿ ದ್ವಿಚಕ್ರ ವಾಹನ ಗಂಗಣ್ಣ ತಲೆ ಛಿದ್ರಗೊಂಡಿದೆ. ಆಟೋ ಚಾಲಕನ ಅಜಾಗರುಕತೆಯಿಂದ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಇನ್ನೂ‌ ದ್ವಿಚಕ್ರ ವಾಹನದ ಹಿಂಬದಿ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಟೋ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ‌.

ABOUT THE AUTHOR

...view details