ಕರ್ನಾಟಕ

karnataka

ರಾಜಕೀಯ ದ್ವೇಷ : ಗೌರಿಬಿದನೂರಲ್ಲಿ ಮೈದುನನ ಕೊಲೆಗೆ ಯತ್ನಿಸಿದ ಬಾವ

By

Published : Sep 26, 2021, 11:43 AM IST

murder

ರಾಜಕೀಯ ದ್ವೇಷ ಹಾಗೂ ಕೌಟುಂಬಿಕ ಕಲಹದ ಹಿನ್ನೆಲೆ ಸ್ವಂತ ಮೈದುನನ ಕೊಲೆಗೆ ಬಾವನೇ ಯತ್ನಿಸಿರುವ ಘಟನೆ ಗೌರಿಬಿದನೂರು ತಾಲೂಕಿನ ಅಲಕಾಪುರ ಗ್ರಾಮದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ: ರಾಜಕೀಯ ದ್ವೇಷ ಹಾಗೂ ಕೌಟುಂಬಿಕ ಕಲಹದ ಹಿನ್ನೆಲೆ ವ್ಯಕ್ತಿಯೋರ್ವನಿಗೆ ಚಾಕು ಇರಿದ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲಕಾಪುರ ಗ್ರಾಮದಲ್ಲಿ ನಡೆದಿದೆ.

ಇಲಿಯಾಜ್ (32) ಎಂಬಾತನ ಬೆನ್ನಿಗೆ ಚಾಕು ಇರಿದಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಅಕ್ಕನ ಗಂಡ ಸುಭಾನ್ ಹಾಗೂ ಸಿದ್ದು ಭಾನ್ ಕಡೆಯವರು ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

ಇಲಿಯಾಜ್, ಪುಟ್ಟಸ್ವಾಮಿಗೌಡ ಬಣದಲ್ಲಿ ಗುರುತಿಸಿಕೊಂಡಿದ್ದ. ರಾಜಕೀಯ ದ್ವೇಷ ಹಾಗೂ ಕೌಟುಂಬಿಕ‌ ಕಲಹದ ಹಿನ್ನೆಲೆ ಚಾಕು ಇರಿಯಲಾಗಿದೆ ಎಂದು ತಿಳಿದುಬಂದಿದೆ. ಘಟನೆ ಹಿನ್ನೆಲೆ ಪುಟ್ಟಸ್ವಾಮಿಗೌಡರ ಬಣದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details