ಕರ್ನಾಟಕ

karnataka

ಮನೆ ಕಳೆದುಕೊಂಡವರಿಗೆ ₹5 ಲಕ್ಷ ಪರಿಹಾರ ಘೋಷಿಸಿದ ಸಚಿವ ಸುಧಾಕರ್

By

Published : Nov 20, 2021, 8:35 PM IST

Updated : Nov 20, 2021, 9:13 PM IST

Minister Sudhakar
ಸಚಿವ ಸುಧಾಕರ್ ()

ಸತತವಾಗಿ ಸುರಿಯುತ್ತಿರುವ ಮಳೆಗೆ 436 ಮನೆಗಳು ಹಾನಿಗೊಂಡಿವೆ. ಇವೆಲ್ಲವನ್ನು ನಾವು ಸರ್ಕಾರದ ಗಮನಕ್ಕೆ ತಂದು ಮನೆ ಕಳೆದುಕೊಂಡವರಿಗೆ ₹5 ಲಕ್ಷ ಪರಿಹಾರ ಕೊಡಿಸುವುದಾಗಿ (Sudhakar announces Rs 5 lakh compensation for homeless)ಭರವಸೆ ನೀಡಿದರು.ಜಿಲ್ಲೆಯಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ಆಯಾ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತದೆ. ಅದೇ ರೀತಿ ಆರೋಗ್ಯ ಇಲಾಖೆಯಿಂದ ಬೇಕಾದಂತಹ ಔಷಧಿಗಳನ್ನ ವಿತರಿಸಲಾಗುತ್ತದೆ. ನೀರಿನ ಮಿಶ್ರಣದಿಂದ ಸಾಕಷ್ಟು ಸಾಂಕ್ರಾಮಿಕ ರೋಗಗಳು ಬರಲಿವೆ..

ಚಿಕ್ಕಬಳ್ಳಾಪುರ :ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ‌ ಮಳೆಯಿಂದ 450ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿವೆ. ಮನೆ ಕಳೆದುಕೊಂಡ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಸಚಿವ ಸುಧಾಕರ್ (Minister Sudhakar) ಭರವಸೆ ನೀಡಿದರು.

ಸಂತ್ರಸ್ತರಿಗೆ ಪರಿಹಾರ ಕಲ್ಪಿಸುವ ಬಗ್ಗೆ ಆರೋಗ್ಯ ಸಚಿವ ಡಾ ಸುಧಾಕರ್ ಭರವಸೆ ನೀಡಿರುವುದು..

ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಸಾಕಷ್ಟು ಅನಾಹುತಗಳು ಸಂಭವಿಸಿವೆ. ಹಾನಿಗೊಳಗಾಗದ ಪ್ರದೇಶಗಳಿಗೆ ಸಚಿವ ಸುಧಾಕರ್​ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ ಜನರಿಗೆ ಧೈರ್ಯ ತುಂಬಿ ಸಮಸ್ಯೆ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಲ್ಕು ದಶಗಳ ನಂತರ ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಇಂತಹ ಮಹಾ ಮಳೆಯನ್ನು ನೋಡುತ್ತಿದ್ದೇನೆ. ಜಿಲ್ಲೆಯ ಬಹುತೇಕ ಕೆರೆಗಳು ತುಂಬಿರುವ ಸಂತೋಷ ಒಂದು ಕಡೆಯಾದರೆ, ಸಾವಿರಾರು ಹೆಕ್ಟೇರ್​​​​​ಗಳಷ್ಟು ಬೆಳೆ ನಾಶವಾಗಿರುವ ದುಃಖ ಇದೆ.

ಸತತವಾಗಿ ಸುರಿಯುತ್ತಿರುವ ಮಳೆಗೆ 436 ಮನೆಗಳು ಹಾನಿಗೊಂಡಿವೆ. ಇವೆಲ್ಲವನ್ನು ನಾವು ಸರ್ಕಾರದ ಗಮನಕ್ಕೆ ತಂದು ಮನೆ ಕಳೆದುಕೊಂಡವರಿಗೆ ₹5 ಲಕ್ಷ ಪರಿಹಾರ ಕೊಡಿಸುವುದಾಗಿ (Sudhakar announces Rs 5 lakh compensation for homeless)ಭರವಸೆ ನೀಡಿದರು.

ಜಿಲ್ಲೆಯಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ಆಯಾ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತದೆ. ಅದೇ ರೀತಿ ಆರೋಗ್ಯ ಇಲಾಖೆಯಿಂದ ಬೇಕಾದಂತಹ ಔಷಧಿಗಳನ್ನ ವಿತರಿಸಲಾಗುತ್ತದೆ. ನೀರಿನ ಮಿಶ್ರಣದಿಂದ ಸಾಕಷ್ಟು ಸಾಂಕ್ರಾಮಿಕ ರೋಗಗಳು ಬರಲಿವೆ.

ಇದರಿಂದ ಯಾವ ರೀತಿಯ ಔಷಧಿಗಳನ್ನು ತಗೆದುಕೊಳ್ಳಬೇಕು ಎಂಬುವುದರ ಬಗ್ಗೆ ತಿಳಿಸಲಾಗುವುದು. ಈಗಾಗಲೇ ಅಗತ್ಯಕ್ಕೆ ಬೇಕಾದ ಔಷಧಿಗಳನ್ನು ಸರಬರಾಜು ಮಾಡಲಾಗಿದೆ ಎಂದು ತಿಳಿಸಿದರು.

ಹವಾಮಾನ ಇಲಾಖೆ (Department of Meteorology) ಇನ್ನೂ ಎರಡ್ಮೂರು ದಿನಗಳ ಕಾಲ ಮಳೆಯಾಗುವ ಮುನ್ನೂಚನೆ ನೀಡಿದೆ. ರಾಜಕಾಲುವೆಗಳ ಒತ್ತುವರಿ ಹಾಗೂ ನಿರ್ಮಾಣದ ಬಗ್ಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸಾರ್ವಜನಿಕರು ತಾವಾಗಿಯೇ ರಾಜಕಾಲುವೆ ಸ್ಥಳಗಳನ್ನು ಬಿಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ ಎಂದರು.

ಇದನ್ನೂ ಓದಿ: ಗೆಹ್ಲೊಟ್​ ಸಂಪುಟದ ಎಲ್ಲ ಸಚಿವರು ರಾಜೀನಾಮೆ.. ನಾಳೆ, ನಾಡಿದ್ದು ಹೊಸ ಕ್ಯಾಬಿನೆಟ್​ ಪುನಾರಚನೆ?

Last Updated :Nov 20, 2021, 9:13 PM IST

ABOUT THE AUTHOR

...view details