ಕರ್ನಾಟಕ

karnataka

ಶ್ರೀನಿವಾಸ ಸಾಗರ ಜಲಾಶಯದ ಬಳಿ ಈಜಲು ತೆರಳಿದ್ದ ಇಬ್ಬರು ಯುವಕರು ಸಾವು

By

Published : Sep 11, 2022, 12:26 PM IST

two-youths-drowned-near-srinivasa-sagar-dam
ಶ್ರೀನಿವಾಸ ಸಾಗರ ಜಲಾಶಯದ ಬಳಿ ಈಜಲು ತೆರಳಿದ್ದ ಇಬ್ಬರು ಯುವಕರು ಸಾವು ()

ಚಿಕ್ಕಬಳ್ಳಾಪುರದ ಶ್ರೀನಿವಾಸ ಸಾಗರ ಜಲಾಶಯ ವೀಕ್ಷಣೆಗೆ ಬಂದಿದ್ದ ಇಬ್ಬರು ಯುವಕರು ನೀರಿನಲ್ಲಿ ಈಜಲು ತೆರಳಿ ಪ್ರಾಣ ಕಳೆದುಕೊಂಡ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ:ಶ್ರೀನಿವಾಸ ಸಾಗರ ಜಲಾಶಯದ ಬಳಿ ಈಜಲು ತೆರಳಿದ್ದ ವೈದ್ಯಕೀಯ ವಿದ್ಯಾರ್ಥಿ ಹಾಗೂ ಮತ್ತೋರ್ವ ಯುವಕ ಸಾವನ್ನಪ್ಪಿರುವ ಘಟನೆ ತಾಲೂಕಿನಲ್ಲಿ ನಡೆದಿದೆ‌. ಮೃತ ಯುವಕರನ್ನು ಮೈಸೂರು ಮೂಲದ ಮೆಡಿಕಲ್ ವಿದ್ಯಾರ್ಥಿ ಸಚ್ಚಿದಾನಂದ ಬಾಬು (19) ಹಾಗೂ ಗೌರಿಬಿದನೂರಿನ ನರೇಶ್ ಬಾಬು (29) ಎಂದು ಗುರುತಿಸಲಾಗಿದೆ.

ಮೈದುಂಬಿರುವ ಶ್ರೀನಿವಾಸ ಸಾಗರ ಜಲಾಶಯ ನೋಡಲು ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ವಾರಾಂತ್ಯದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಸಚ್ಚಿದಾನಂದ ತನ್ನ ಸ್ನೇಹಿತರ ಜೊತೆ ಜಲಾಶಯಕ್ಕೆ ಬಂದಿದ್ದ. ಜಲಾಶಯದ ಮುಂಭಾಗದಲ್ಲಿನ ನೀರಿನ ಹೊಂಡದಲ್ಲಿ ಈಜಾಡುವ ವೇಳೆ ಸಚ್ಚಿದಾನಂದ ಮುಳುಗಿದ್ದಾನೆ. ಆಗ ಆತನನ್ನು ರಕ್ಷಿಸಲು ಯತ್ನಿಸಿದ ನರೇಶ್ ಕೂಡ ನೀರಿನಲ್ಲಿ ಮುಳುಗಿದ್ದು, ಇಬ್ಬರೂ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಸದ್ಯ ಶವಗಳಿಗಾಗಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ:ಹೊಸಪೇಟೆಯಲ್ಲಿ ಗಣಪತಿ ನಿಮಜ್ಜನ ವೇಳೆ ಕ್ರೇನ್ ಪಲ್ಟಿ: ಓರ್ವ ಸಾವು, ಮತ್ತೋರ್ವ ಗಂಭೀರ

ABOUT THE AUTHOR

...view details