ಚಿಕ್ಕಮಗಳೂರು: ರಸ್ತೆಯ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಸಖರಾಯ ಪಟ್ಟಣದ ಗೌರಿ ಹಳ್ಳದ ಬಳಿ ನಡೆದಿದೆ.
ಚಿಕ್ಕಮಗಳೂರಿಂದ ಶಿವಮೊಗ್ಗದ ಕಡೆ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್, ನಿಂತ ಲಾರಿಗೆ ಡಿಕ್ಕಿ ಹೊಡೆದಿದ್ದರಿಂದ ಅಪಘಾತ ಸಂಭವಿಸಿದೆ. ಲಾರಿ ಚಾಲಕ ಸೇರಿದಂತೆ ಬಸ್ನಲ್ಲಿದ್ದ ಇಬ್ಬರು ಮಹಿಳೆಯರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಮೂಲದ ಲಾರಿ ಚಾಲಕ ಶರವಣ, ಬೇಲೂರಿನ ಹಗರೆ ಮೂಲದ ಕಡೂರು ಸರ್ವೆ ಡಿಪಾರ್ಟ್ಮೆಂಟ್ ಉದ್ಯೋಗಿ ರುಚಿತ (22) ಮೃತಪಟ್ಟಿದ್ದಾರೆ. ಇನ್ನೊಬ್ಬರ ಹೆಸರು ಗೊತ್ತಾಗಿಲ್ಲ.
ಬಸ್ನಲ್ಲಿದ್ದ 10 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಖರಾಯಪಟ್ಟಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ರಸ್ತೆಯ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಮೂರು ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯ ಪಟ್ಟಣದ ಗೌರಿ ಹಳ್ಳದ ಬಳಿ ಈ ಘಟನೆ ನಡೆದಿದ್ದು ಚಿಕ್ಕಮಗಳೂರಿಂದಾ ಶಿವಮೊಗ್ಗದ ಕಡೆ ಹೋಗುತ್ತಿದ್ದ ಸರ್ಕಾರಿ ಬಸ್ ಲಾರಿಗೆ ಡಿಕ್ಕಿ ಹೊಡೆದಿದ್ದು ಲಾರಿ ಚಾಲಕ ಸೇರಿದಂತೆ ಬಸ್ ನಲ್ಲಿದ್ದಂತಹ ಇಬ್ಬರೂ ಮಹಿಳೆಯರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನು ಬಸ್ ನಲ್ಲಿದ್ದಂತಹ 10 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯವಾಗಿದೆ. ಬಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸರ್ಕಾರಿ ಬಸ್ ಸಂಪೂರ್ಣ ನುಜ್ಜು ಗುಜ್ಜಾಗಿದೆ ಗಂಭೀರವಾಗಿ ಗಾಯಗೊಂಡ ಪ್ರಯಾಣಿಕರನ್ನು ಸ್ಥಳೀಯ ಆಸ್ವತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.ಸಖರಾಯಪಟ್ಟಣ ಪೋಲಿಸರು ಸ್ಥಳಕ್ಕೇ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Conclusion:ರಾಜಕುಮಾರ್.....
ಈ ಟಿವಿ ಭಾರತ್....
ಚಿಕ್ಕಮಗಳೂರು....