ಕರ್ನಾಟಕ

karnataka

ಪಿಎಫ್​ಐ ಕಾರ್ಯಕರ್ತರ ಮನೆ ಮೇಲೆ ಇಂದೂ ಮುಂದುವರಿದ ದಾಳಿ

By

Published : Sep 29, 2022, 3:56 PM IST

Enter here.. Attack on house of PFI workers continued today

ಠಾಣೆಗೆ ಹಾಜರಾಗದ ಹಿನ್ನೆಲೆ ಜಿಲ್ಲಾಧಿಕಾರಿಯಿಂದ ಸರ್ಚ್ ವಾರೆಂಟ್ ಜಾರಿಯಾಗಿದ್ದು, ಇಂದು ಮನೆ ಮೇಲೆ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.

ಚಿಕ್ಕಮಗಳೂರು:ಜಿಲ್ಲೆಯಲ್ಲಿ ಇಂದು ಕೂಡ ಪಿಎಫ್​​ಐ ಮುಖಂಡರ ಮನೆಗಳ ಮೇಲೆ ಪೊಲೀಸರ ದಾಳಿ ಮುಂದುವರೆದಿದೆ. ಠಾಣೆಗೆ ಹಾಜರಾಗದ ಹಿನ್ನೆಲೆ, ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ವಗಾರ್ ರಸ್ತೆಯಲ್ಲಿರುವ ಆರೀಫ್​ ಮನೆ ಮೇಲೆ ಡಿಸಿ ಮಾರ್ಗದರ್ಶನ ಮೇರೆಗೆ ಅಧಿಕಾರಿಗಳು, ಪೊಲೀಸರು ದಾಳಿ ಮಾಡಿದ್ದಾರೆ.

ಪಿಎಫ್​ಐ ಕಾರ್ಯಕರ್ತರ ಮನೆ ಮೇಲೆ ಇಂದೂ ಮುಂದುವರೆದ ದಾಳಿ

ಎರಡು ದಿನದ ಹಿಂದೆ ಠಾಣೆಗೆ ಬಂದು ಹಾಜರಾಗುವಂತೆ ಪೊಲೀಸರು ಸೂಚನೆ ನೀಡಿದ್ದರು. ಠಾಣೆಗೆ ಹಾಜರಾಗದ ಹಿನ್ನೆಲೆ ಜಿಲ್ಲಾಧಿಕಾರಿಯಿಂದ ಸರ್ಚ್ ವಾರಂಟ್ ಜಾರಿಯಾಗಿದ್ದು, ಇಂದು ಮನೆ ಮೇಲೆ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಸಿಪಿಐ ಸತ್ಯನಾರಾಯಣ, ಪಿಎಸ್ಐಗಳಾದ ಸಜಿತ್, ಕೀರ್ತಿ ಕುಮಾರ್ ಹಾಗೂ ಸಿಬ್ಬಂದಿಯಿಂದ ದಾಳಿ ನಡೆಸಲಾಗಿದ್ದು, ಪೊಲೀಸರಿಗೆ ಕಂದಾಯ ಇಲಾಖೆ ಅಧಿಕಾರಿಗಳು ಸಾಥ್ ನೀಡಿದ್ದಾರೆ.

ಇದನ್ನೂ ಓದಿ:ಶಿವಮೊಗ್ಗದಲ್ಲಿ ಅಧಿಕಾರಿಗಳಿಂದ ಪಿಎಫ್​ಐ ಕಾರ್ಯಕರ್ತರ ಮನೆ ಮೇಲೆ ದಾಳಿ

ABOUT THE AUTHOR

...view details