ಕರ್ನಾಟಕ

karnataka

ಚಿಕ್ಕಮಗಳೂರು ಪೊಲೀಸ್​ ಠಾಣೆ ಎದುರು ಮಾಜಿ ಸಚಿವ ಸಿ ಟಿ ರವಿ ಪ್ರತಿಭಟನೆ

By ETV Bharat Karnataka Team

Published : Jan 4, 2024, 1:37 PM IST

Updated : Jan 4, 2024, 8:19 PM IST

ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಮಾಜಿ ಶಾಸಕ ಸಿ ಟಿ ರವಿ ಚಿಕ್ಕಮಗಳೂರು ಪೊಲೀಸ್​ ಠಾಣೆ ಮುಂದೆ ಪ್ರತಿಭಟನೆ ನಡೆಸಿದರು.

ಸಿ ಟಿ ರವಿ ಪ್ರತಿಭಟನೆ
ಸಿ ಟಿ ರವಿ ಪ್ರತಿಭಟನೆ

ಪೊಲೀಸ್​ ಠಾಣೆ ಎದುರು ಸಿ.ಟಿ ರವಿ ಪ್ರತಿಭಟನೆ

ಚಿಕ್ಕಮಗಳೂರು: ನಾನೂ ಕರಸೇವಕ ನನ್ನನ್ನು ಬಂಧಿಸಿ ಎಂದು ಮಾಜಿ ಶಾಸಕ ಸಿ.ಟಿ ರವಿ ನಗರ ಪೊಲೀಸ್ ಠಾಣೆ ಎದುರು ಧರಣಿ ನಡೆಸಿದರು. ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಸಿ ಟಿ ರವಿ ಮೌನ ಪ್ರತಿಭಟನೆ ನಡೆಸಿದ್ದು, ಶ್ರೀ ರಾಮ್, ಜೈ ರಾಮ್ ಎನ್ನುತ್ತ ಠಾಣೆ ಮುಂದೆ ಗುರುವಾರ ಧರಣಿಗೆ ಕುಳಿತಿದ್ದರು.

ಬಿಜೆಪಿಯ ಹಲವು ಕಾರ್ಯಕರ್ತರು ಸಹ ಠಾಣೆಯ ಮುಂದೆ ಜಮಾಯಿಸಿದ್ದರು. ಸ್ಥಳಕ್ಕೆ ಆಗಮಿಸಿದ ಹೆಚ್ಚುವರಿ ಎಸ್ಪಿ ಕೃಷ್ಣಮೂರ್ತಿ ಪೊಲೀಸ್ ಠಾಣೆ ಒಳಗೆ ರವಿ ಅವರನ್ನು ಕರೆದೊಯ್ದರು. ಈ ವೇಳೆ ಆಕ್ರೋಶಗೊಂಡ ಬಿಜೆಪಿ ಕಾರ್ಯಕರ್ತರು ನಾವೂ ಕರಸೇವಕರೇ, ನಮ್ಮನ್ನೂ ಬಂಧಿಸಿ ಎಂದು ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಆಗ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಿದರು.

ಶಾಸಕ ವಿ ಸುನಿಲ್​ ಕುಮಾರ್ ಏಕಾಂಗಿ ಪ್ರತಿಭಟನೆ :ಮತ್ತೊಂದೆಡೆ ಬೆಂಗಳೂರಿನ ಸದಾಶಿವನಗರ ಪೊಲೀಸ್​ ಠಾಣೆ ಎದುರು ​ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಏಕಾಂಗಿಯಾಗಿ ಪ್ರತಿಭಟನೆ ನಡೆಸುತ್ತಿದ್ದ ಶಾಸಕ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಅವ​ರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. 'ಅಯೋಧ್ಯೆ ರಾಮಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ' ಎಂಬ ಬರಹವುಳ್ಳ ಕರಪತ್ರ ಹಿಡಿದು, ರಾಜ್ಯ ಸರ್ಕಾರದ ವಿರುದ್ಧ ಸುನಿಲ್​ ಕುಮಾರ್ ಪ್ರತಿಭಟನೆ ನಡೆಸುತ್ತಿದ್ದರು.

ಇದನ್ನೂ ಓದಿ:ನಾವು ಮಾಡಿರುವ ಕೆಲಸ ನೋಡಿ ಕಾಂಗ್ರೆಸ್​ನವರಿಗೆ ಹೊಟ್ಟೆ ಉರಿ: ಸಿ.ಟಿ. ರವಿ

Last Updated :Jan 4, 2024, 8:19 PM IST

ABOUT THE AUTHOR

...view details