ಕರ್ನಾಟಕ

karnataka

ಪುನೀತ್‌ ರಾಜ್‌ಕುಮಾರ್​ಗೆ ಮರಣೋತ್ತರ ಬಸವಶ್ರೀ ಪುರಸ್ಕಾರ ಪ್ರದಾನ; ಪತ್ನಿಯಿಂದ ಪ್ರಶಸ್ತಿ ಸ್ವೀಕಾರ

By

Published : May 3, 2022, 3:56 PM IST

ಕನ್ನಡ ಚಲನಚಿತ್ರ ರಂಗದ ಹೆಸರಾಂತ ನಟ ಪುನೀತ್‌ ರಾಜ್‌ಕುಮಾರ್ ಅವರಿಗೆ ಮರಣೋತ್ತರವಾಗಿ 2021ನೇ ಸಾಲಿನ ಬಸವಶ್ರೀ ಪ್ರಶಸ್ತಿಯನ್ನು ನೀಡಲಾಯಿತು. ಪತ್ನಿ ಅಶ್ವಿನಿ ಪುನೀತ್​ರಾಜ್​ಕುಮಾರ್ ​ಅವರು ಪ್ರಶಸ್ತಿ ಸ್ವೀಕರಿಸಿದರು. ಪ್ರಶಸ್ತಿಯು 5 ಲಕ್ಷ ರೂ. ನಗದು ಮತ್ತು ಸ್ಮರಣ ಫಲಕವನ್ನು ಒಳಗೊಂಡಿದ್ದು, ಪ್ರಶಸ್ತಿ ಪಡೆಯುವ ವೇಳೆ ಅಶ್ವಿನಿ ಪುನೀತ್ ರಾಜ್​​ಕುಮಾರ್ ಒಂದು ಕ್ಷಣ ಭಾವುಕರಾದರು.

Ashwini Receives 'Basavashree Award' On Behalf Of Dr Puneeth Rajkumar In Chitradurga
ನಟ ಪುನೀತ್‌ ರಾಜ್‌ಕುಮಾರ್​ಗೆ ಮರಣೋತ್ತರ ಬಸವಶ್ರೀ ಪುರಸ್ಕಾರ ಪ್ರದಾನ

ಚಿತ್ರದುರ್ಗ:ಮುರುಘಾ ಮಠದ 2021ನೇ ಸಾಲಿನ ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿಯನ್ನು ಮರಣೋತ್ತರವಾಗಿ ಸ್ಯಾಂಡಲ್​ವುಡ್​​​ನ ಹೆಸರಾಂತ ನಟ ಮತ್ತು ಸಾಂಸ್ಕೃತಿಕ ರಾಯಭಾರಿ ದಿ. ಡಾ.ಪುನೀತ್‌ ರಾಜ್‌ಕುಮಾರ್ ಅವರಿಗೆ ನೀಡಲಾಗಿದ್ದು, ಅಶ್ವಿನಿ ಪುನೀತ್​ರಾಜ್​ಕುಮಾರ್​ ಅವರು ಪ್ರಶಸ್ತಿ ಸ್ವೀಕರಿಸಿದರು.

ಡಾ.ಶಿವಮೂರ್ತಿ ಮುರುಘಾ ಶರಣರು

ಬಸವ ಜಯಂತಿ ದಿನವಾದ ಇಂದು ಚಿತ್ರದುರ್ಗ ಮುರುಘಾ ಮಠದ ಅನುಭವ ಮಂಟಪದಲ್ಲಿ ಆಯೋಜಿಸಿದ್ದ ಕಾರ್ಯಕ್ರದಲ್ಲಿ ಬಸವಶ್ರೀ ಪ್ರಶಸ್ತಿಯನ್ನು ಡಾ. ಶಿವಮೂರ್ತಿ ಮುರುಘಾ ಶರಣರು ಪ್ರದಾನ ಮಾಡಿದರು. ಪ್ರಶಸ್ತಿಯು 5 ಲಕ್ಷ ರೂ. ನಗದು ಮತ್ತು ಸ್ಮರಣ ಫಲಕವನ್ನು ಒಳಗೊಂಡಿದೆ.

ನಟ ಪುನೀತ್‌ ರಾಜ್‌ಕುಮಾರ್​ಗೆ ಮರಣೋತ್ತರ ಬಸವಶ್ರೀ ಪುರಸ್ಕಾರ ಪ್ರದಾನ

ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಡಾ.ಶಿವಮೂರ್ತಿ ಮುರುಘಾ ಶರಣರು, ಅಶ್ವಿನಿ ಪುನೀತ್​ ರಾಜ್​ಕುಮಾರ್ ಅವರಿಗೆ ಬಸವಶ್ರೀ ಪ್ರಶಸ್ತಿಯನ್ನು ಕೊಡುವ ಮೂಲಕ ಅವರ ಕುಟುಂಬಕ್ಕೆ ಗೌರವ ಸಲ್ಲಿಸಲಾಗುತ್ತಿದೆ. ಪುನೀತ್​ ಅವರು ನಟರಾಗಿ, ನಿರ್ಮಾಕಪರಾಗಿ, ಸಾಂಸ್ಕೃತಿಕ ರಾಯಭಾರಿ ಮಾನವೀಯ ಕಳಕಳಿಯ ಸಮಾಜಮುಖಿ ಕಾರ್ಯಗಳನ್ನು ಮಾಡಿದ್ದಾರೆ. ತಂದೆಯ ಮಾರ್ಗದರ್ಶನ ಆಂತರ್ಯದಲ್ಲಿಟ್ಟುಕೊಂಡು ಆಕಾಶದ ಎತ್ತರಕ್ಕೆ ಬೆಳೆದರು. ಅವರಂತಹ ಪ್ರತಿಭೆಯನ್ನು ಕಂಡ ನಾವುಗಳೇ ಧನ್ಯರು ಎಂದು ಅವರ ಗುಣಗಳನ್ನು ಕೊಂಡಾಡಿದರು.

ಸಚಿವ ಬಿ.ಸಿ. ಪಾಟೀಲ್, ಶಾಸಕ ತಿಪ್ಪಾರೆಡ್ಡಿ, ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ, ಸಿಇಒ ನಂದಿನಿ ದೇವೆ, ಪೊಲೀಸ್ ವರಿಷ್ಠಾಧಿಕಾರಿ ಪರುಶುರಾಮ್ ಉಪಸ್ಥಿತರಿದ್ದರು.

ABOUT THE AUTHOR

...view details