ಕರ್ನಾಟಕ

karnataka

ಚಿತ್ರದುರ್ಗದ ಬಳಿ ಲಾರಿ - ಆಟೋ ನಡುವೆ ಅಪಘಾತ: ಅಂತ್ಯ ಸಂಸ್ಕಾರಕ್ಕೆ ಹೊರಟಿದ್ದ ಮೂವರ ದುರ್ಮರಣ

By

Published : Mar 31, 2022, 12:07 PM IST

ಮಾರಘಟ್ಟದಲ್ಲಿ ಸಂಬಂಧಿಕರೊಬ್ಬರು ಮೃತಪಟ್ಟಿದ್ದರಿಂದ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಕೆಳಗೋಟೆ ಗ್ರಾಮದ ಒಂಬತ್ತು ಜನರು ಆಟೋದಲ್ಲಿ ಹೊರಟಿದ್ದರು. ಈ ವೇಳೆ, ದಾವಣಗೆರೆಯಿಂದ ಚಿತ್ರದುರ್ಗದ ಕಡೆ ಬರುತ್ತಿದ್ದ ಐಷರ್​ ಲಾರಿ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಚಿತ್ರದುರ್ಗದ ಬಳಿ ಲಾರಿ-ಆಟೋ ನಡುವೆ ಅಪಘಾತ
Road accident in Chitradurga

ಚಿತ್ರದುರ್ಗ: ಲಾರಿ ಮತ್ತು ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ
ತಾಲೂಕಿನ ಕಾತ್ರಾಳು ಕೆರೆಯ ಬಳಿ ನಡೆದಿದೆ. ಅಲ್ಲದೇ, ಈ ಘಟನೆಯಲ್ಲಿ ಇತರ ಆರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜಗಳೂರು ತಾಲೂಕಿನ ಕೆಳಗೋಟೆ ಗ್ರಾಮದ ಹಾಲಪ್ಪ (70), ರುದ್ರಮ್ಮ (58) ಹಾಗೂ ಸಣ್ಣ ಬಸವರಾಜಪ್ಪ (45) ಎಂಬುವವರೇ ಮೃತರು.

ಮಾರಘಟ್ಟದಲ್ಲಿ ಸಂಬಂಧಿಕರೊಬ್ಬರು ಮೃತಪಟ್ಟಿದ್ದರಿಂದ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಕೆಳಗೋಟೆ ಗ್ರಾಮದ ಒಂಬತ್ತು ಜನರು ಆಟೋದಲ್ಲಿ ಹೊರಟಿದ್ದರು. ಈ ವೇಳೆ ದಾವಣಗೆರೆಯಿಂದ ಚಿತ್ರದುರ್ಗದ ಕಡೆ ಬರುತ್ತಿದ್ದ ಐಷರ್​ ಲಾರಿ ಚಾಲಕನ ನಿಯಂತ್ರಣ ಕಳೆದುಕೊಂಡು ಆಟೋಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಲಾರಿ ಡಿಕ್ಕಿ ಹೊಡೆದ ರಭಸಕ್ಕೆಆಟೋ ಸಂಪೂರ್ಣ ನಜ್ಜುಗುಜ್ಜಾಗಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಎಲ್ಲರನ್ನೂ ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಇದರಲ್ಲಿ ಮೂವರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಉಳಿದಂತೆ ಕಲ್ಲೇಶಪ್ಪ, ಚಂದ್ರಪ್ಪ, ಪಾರ್ವತಮ್ಮ, ರುದ್ರೇಶಪ್ಪ, ಸಿದ್ದೇಶ್‌ ಸೇರಿ ಆರು ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಪಘಾತದ ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಈ ಬಗ್ಗೆ ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details