ಕರ್ನಾಟಕ

karnataka

ಕಾರು-ಬಸ್ ನಡುವೆ ಅಪಘಾತ: ಇಬ್ಬರ ದುರ್ಮರಣ

By

Published : Aug 27, 2020, 3:08 PM IST

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಗೇಟ್ ಬಳಿ ಕಾರು ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದೆ. ಇದರಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

Road accidents
Road accidents

ಚಿತ್ರದುರ್ಗ:ಕಾರು ಹಾಗೂ ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಗೇಟ್ ಬಳಿ ನಡೆದಿದೆ.

ಕಾರಿನಲ್ಲಿದ್ದ ಸಾಯಿಬಣ್ಣ(30), ವೆಂಕಟೇಶ್ (30) ಎಂಬುವವರು ಸಾವನ್ನಪ್ಪಿದ್ದು, ಇವರು ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಡೂರು ಗ್ರಾಮದವರಾಗಿದ್ದಾರೆ.

ಘಟನೆಯಲ್ಲಿ ಆನಂದ್ (33) ಸೇರಿದಂತೆ ಮತ್ತೊಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ. ಅವರನ್ನು ಹತ್ತಿರದ ಹಿರಿಯೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಐಮಂಗಲದ ಠಾಣಾ ಪೊಲೀಸರು ಭೇಟಿ ನೀಡಿ ಮಾಹಿತಿ ಪಡೆದಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ABOUT THE AUTHOR

...view details