ಕರ್ನಾಟಕ

karnataka

ಆರೋಪಿತ ಶ್ರೀಗಳ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿದ್ದೇವೆ : ಚಿತ್ರದುರ್ಗ ಎಸ್​ಪಿ

By

Published : Sep 1, 2022, 10:37 PM IST

Updated : Sep 1, 2022, 11:06 PM IST

ಆರೋಪಿತ ಶ್ರೀಗಳ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿದ್ದೇವೆ

ಈಗಾಗಲೇ ಚಿತ್ರದುರ್ಗದ ಮುರುಘಾ ಶ್ರೀಗಳ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿದ್ದೇವೆ ಎಂದು ಚಿತ್ರದುರ್ಗದ ಎಸ್​ಪಿ ಮಾಹಿತಿ ನೀಡಿದ್ದಾರೆ.

ಚಿತ್ರದುರ್ಗ: ಈಗಾಗಲೇ ಚಿತ್ರದುರ್ಗದ ಮುರುಘಾ ಶ್ರೀಗಳ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿದ್ದೇವೆ. ಮಹಿಳಾ ವಾರ್ಡನ್‌ ವಿಚಾರಣೆ ನಡೆಸುತ್ತಿದ್ದೇವೆ, ಅವರನ್ನು ವಶಕ್ಕೆ ಪಡೆದಿಲ್ಲ. ತನಿಖೆ ನಡೆಯುತ್ತಿದೆ ಎಂದು ಚಿತ್ರದುರ್ಗ ಎಸ್​ಪಿ ಕೆ.ಪರಶುರಾಮ ಹೇಳಿದ್ದಾರೆ.

ಇನ್ನು ಚಿತ್ರದುರ್ಗದ ಮುರುಘಾ ಶ್ರೀಗಳು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾದ ಆರೋಪ ಪ್ರಕರಣವನ್ನು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು (ಎನ್‌ಸಿಪಿಸಿಆರ್) ಸ್ವಯಂಪ್ರೇರಿತವಾಗಿ ಪರಿಗಣಿಸಿದೆ.

ಎನ್‌ಸಿಪಿಸಿಆರ್ ಕೂಡ ವಿಚಾರಣೆ ನಡೆಸಬೇಕು ಮತ್ತು ಸಂತ್ರಸ್ತರ ಗುರುತನ್ನು ಬಹಿರಂಗಪಡಿಸುವುದಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕು ಎಂದು ವಿನಂತಿಸಿದೆ. ಏಳು ದಿನಗಳೊಳಗೆ ವಿವರವಾದ ವರದಿ ನೀಡುವಂತೆಯೂ ಕೋರಿದೆ.

ಇಂದು ಸಂತ್ರಸ್ತೆಯರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಪಬ್ಲಿಕ್ ಪ್ರಾಸಿಕ್ಯೂಟರ್ ಆಕ್ಷೇಪಣೆಗಳನ್ನು ಸಲ್ಲಿಸಲು ಸಮಯ ತೆಗೆದುಕೊಂಡಿದ್ದರು.

Last Updated :Sep 1, 2022, 11:06 PM IST

ABOUT THE AUTHOR

...view details