ಉಳ್ಳಾಲ(ದಕ್ಷಿಣ ಕನ್ನಡ): ಬೆಂಗಳೂರಿಂದ ಮಂಗಳೂರಿನ ನರಿಂಗಾನ ಗ್ರಾಮದ ತೌಡುಗೋಳಿಗೆ ಕಾರಲ್ಲಿ ಸಾಗಿಸಲಾಗುತ್ತಿದ್ದ 2 ಲಕ್ಷ ಮೌಲ್ಯದ ಎಮ್ಡಿಎಮ್ಎ ಮತ್ತು ಗಾಂಜವನ್ನು ಕೊಣಾಜೆ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.
ಅಕ್ರಮ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೊಯ್ದಿನ್ ಹಫೀಜ್ (36), ಮಹಮ್ಮದ್ ಸಿರಾಜ್ (43), ಇಕ್ಬಾಲ್ (30) ಮಹಮದ್ ಅಝೀಜ್ (33) ಬಂಧಿತರು.