ಕರ್ನಾಟಕ

karnataka

ಕರಾವಳಿಯಲ್ಲಿ ಭಾರಿ ಮಳೆ: ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಮುಳುಗಡೆ

By

Published : Jul 4, 2022, 4:22 PM IST

ಘಟ್ಟ ಪ್ರದೇಶ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಮಳೆ ಹೆಚ್ಚಾಗಿರುವ ಕಾರಣ ಕುಮಾರಧಾರ ಮತ್ತು ನೇತ್ರಾವತಿ ನದಿ ಉಕ್ಕಿಹರಿಯುತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯದ ಸ್ನಾನ ಘಟ್ಟ ಮುಳುಗಡೆಯಾಗಿದೆ.

heavy rain in Dakshina Kannada District
ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಮುಳುಗಡೆ

ಸುಬ್ರಹ್ಮಣ್ಯ(ದಕ್ಷಿಣ ಕನ್ನಡ):ಕಳೆದೆರಡು ದಿನಗಳಿಂದಜಿಲ್ಲಾದ್ಯಂತ ಮತ್ತು ಘಟ್ಟ ಪ್ರದೇಶದಲ್ಲಿ ಗಣನೀಯ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಪರಿಣಾಮ ಜಿಲ್ಲೆಯ ಪ್ರಮುಖ ನದಿಗಳಾದ ನೇತ್ರಾವತಿ ಮತ್ತು ಕುಮಾರಧಾರಾ ನೀರಿನ ಹರಿವಿನ ಪ್ರಮಾಣ ಏರಿಕೆಯಾಗಿದೆ. ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾದ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ನೀರಿನಿಂದ ಸಂಪೂರ್ಣ ಮುಳುಗಡೆಯಾಗಿದೆ.

ಸ್ನಾನಘಟ್ಟ ಮಾತ್ರವಲ್ಲದೇ, ಸ್ನಾನಘಟ್ಟದ ಬಳಿಯಿರುವ ದೇವರ‌ಕಟ್ಟೆಯೂ ಭಾಗಶಃ ಮುಳುಗಡೆಯಾಗಿದ್ದು, ಕ್ಷೇತ್ರಕ್ಕೆ ಬರುವ ಭಕ್ತಾಧಿಗಳಿಗೆ ತೀರ್ಥಸ್ನಾನ ನೆರವೇರಿಸಲು ತೊಂದರೆಯಾಗಿದೆ. ಭಕ್ತಾಧಿಗಳು ಪ್ರವಾಹದ ನೀರಿನಲ್ಲೇ ತೀರ್ಥಸ್ನಾನ ನೆರವೇರಿಸುತ್ತಿದ್ದಾರೆ. ದೇವಸ್ಥಾನದ ವತಿಯಿಂದ ಹಗ್ಗದ ಸಹಾಯದ ಮೂಲಕ ತೀರ್ಥಸ್ನಾನ ನೆರವೇರಿಸಲು ಅನುವು ಮಾಡಿಕೊಡಲಾಗಿದೆ ಮತ್ತು ರಕ್ಷಣೆಗೆ ಗಾರ್ಡ್​ಗಳನ್ನು ನಿಯೋಜಿಸಲಾಗಿದೆ.

ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಮುಳುಗಡೆ

ಮಳೆಯಿಂದಾಗಿ ಕುಮಾರಧಾರದ ಉಪನದಿಗಳು ತುಂಬಿರಿಯುತ್ತಿವೆ. ನದಿಯ ಆಸುಪಾಸಿನ ಕೃಷಿ ತೋಟಗಳು ಜಲಾವೃತವಾಗಿದೆ.

ಇದನ್ನೂ ಓದಿ:ಮೈದುಂಬಿ ಹರಿಯುತ್ತಿರುವ ಭದ್ರಾ ನದಿ: ಮುಳುಗಡೆಯಾದ ಹೆಬ್ಬಾಳೆ ಸೇತುವೆ

ABOUT THE AUTHOR

...view details