ಮಂಗಳೂರು(ದಕ್ಷಿಣ ಕನ್ನಡ): ಕಟೀಲು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನಟ ಸುದೀಪ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದ.ಕ ಜಿಲ್ಲೆಯ ಮಂಗಳೂರು ತಾಲೂಕಿನಲ್ಲಿರುವ ಪ್ರಸಿದ್ಧ ದೇಗುಲಕ್ಕೆ ಪತ್ನಿ ಪ್ರಿಯಾ ಜೊತೆಗೂಡಿ ಅವರು ಆಗಮಿಸಿದರು. ದೇವಸ್ಥಾನದ ವತಿಯಿಂದ ಗೌರವ ಸಲ್ಲಿಸಲಾಯಿತು. ಕಟೀಲು ಮತ್ತು ಮುಲ್ಕಿಯಲ್ಲಿ ನಡೆಯಲಿರುವ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರಿಗೆ ಸುದೀಪ್ ಆಗಮಿಸಿದ್ದಾರೆ.
Last Updated :Dec 4, 2022, 11:56 AM IST