ಕರ್ನಾಟಕ

karnataka

ಮಂಗಳೂರಿನಲ್ಲಿ ನೈತಿಕ ಪೊಲೀಸ್​​ಗಿರಿ: ಮೂವರ ಬಂಧನ

By ETV Bharat Karnataka Team

Published : Dec 23, 2023, 1:30 PM IST

Updated : Dec 23, 2023, 4:43 PM IST

ಮಂಗಳೂರಿನಲ್ಲಿ ಕೇರಳದ ಯುವಕ ಮತ್ತು ಯವತಿ ಮೇಲೆ ನೈತಿಕ ಪೊಲೀಸ್​​ಗಿರಿ ನಡೆಸಿರುವ ಘಟನೆ ವರದಿಯಾಗಿದೆ.

ನೈತಿಕ ಪೊಲೀಸ್ ಗಿರಿ
ನೈತಿಕ ಪೊಲೀಸ್ ಗಿರಿ

ಮಂಗಳೂರು: ನಗರದಲ್ಲಿ ಮತ್ತೊಂದು ನೈತಿಕ ಪೊಲೀಸ್​​ಗಿರಿ ನಡೆದಿದ್ದು, ಈ ಸಂಬಂಧ ಮೂವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್ 21 ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಹಂಪನಕಟ್ಟೆಯ ಗುಡ್​ಟೈಮ್ ಶಾರ್ಟ್ ಈಟ್ಸ್ ಶಾಪ್ ಬಳಿ ಕೇರಳದ ಯುವಕ ಮತ್ತು ಯುವತಿಯನ್ನು ವ್ಯಕ್ತಿಯೊಬ್ಬ ತಡೆದಿದ್ದಾನೆ. ಯುವಕ ಮತ್ತು ಯುವತಿ ಬೇರೆ ಬೇರೆ ಸಮುದಾಯಕ್ಕೆ ಸೇರಿದವರಾ ಎಂದು ಪರಿಶೀಲಿಸುವ ನೆಪದಲ್ಲಿ ಅವರ ಮೇಲೆ ರೇಗಾಡಿ ಐಡಿ ಕಾರ್ಡ್ ಕೇಳಿದ್ದಾನೆ ಎನ್ನಲಾಗಿದೆ.

ಈ‌ ಸಂದರ್ಭದಲ್ಲಿ ಯುವಕ ಮತ್ತು ಯುವತಿ ಆಟೋ ರಿಕ್ಷಾವನ್ನು ಹತ್ತಿ ಅಲ್ಲಿಂದ ತೆರಳಲು ಯತ್ನಿಸಿದ್ದಾರೆ. ಆಗ ಆಟೋ ನಿಲ್ಲಿಸಲು ಯತ್ನಿಸಿದ ಆರೋಪಿಯು ಆಟೋ ಚಾಲಕನಿಗೂ ಗದರಿಸಿದ್ದಾನೆ. ಅಷ್ಟರಲ್ಲಿ ಬೇರೆಯವರು ಮಧ್ಯ ಪ್ರವೇಶಿಸಿದ್ದಾರೆ. ಹುಡುಗ ಮತ್ತು ಹುಡುಗಿ ತಮ್ಮನ್ನು ರೈಲ್ವೇ ನಿಲ್ದಾಣಕ್ಕೆ ಡ್ರಾಪ್ ಮಾಡುವಂತೆ ಆಟೋ ಚಾಲಕನಿಗೆ ಕೇಳಿದ್ದಾರೆ. ಬಳಿಕ ಆಟೋ ಚಾಲಕ ನೀಡಿದ ದೂರಿನ ಮೇರೆಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್​ವಾಲ್ ತಿಳಿಸಿದ್ದಾರೆ.

ಹಿಂದಿನ ಪ್ರಕರಣಗಳು, ಉಪ್ಪಿನಂಗಡಿಯಲ್ಲೂ ಇಂತಹದ್ದೇ ಘಟನೆ:ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ತಾಲೂಕಿನಲ್ಲೂ ಇತ್ತೀಚೆಗೆ ನೈತಿಕ ಪೊಲೀಸ್ ಗಿರಿ ಸದ್ದು ಮಾಡಿತ್ತು. ಯುವಕ ಯುವತಿಯನ್ನು ತಡೆದು ನಿಲ್ಲಿಸಿದ ಯುವಕರ ತಂಡವು ಹಲ್ಲೆ ನಡೆಸಿ, ಬೆದರಿಕೆ ಹಾಕಿತ್ತು. ಯುವತಿ ಪರಿಚಿತ ವಿದ್ಯಾರ್ಥಿಯೊಂದಿಗೆ ಇದ್ದುದನ್ನು ನೋಡಿದ ಯುವಕರ ತಂಡವು ತಡೆದು ನಿಲ್ಲಿಸಿತ್ತು. ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಲ್ಲದೆ ಆ ತಂಡ ಹಲ್ಲೆ ನಡೆಸಿ ನೈತಿಕ ಪೊಲೀಸ್​​ಗಿರಿ ಮೆರೆದಿತ್ತು. ಈ ಸಂಬಂಧ ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ:Moral policing: ಮೂಡುಬಿದಿರೆಯಲ್ಲಿ ನೈತಿಕ ಪೊಲೀಸ್​ಗಿರಿ.. ಮೂವರು ಆರೋಪಿಗಳ ಬಂಧನ

Last Updated :Dec 23, 2023, 4:43 PM IST

ABOUT THE AUTHOR

...view details