ಕರ್ನಾಟಕ

karnataka

ಕಾಂಗ್ರೆಸ್ ಸೇರುವುದು ಖಚಿತ: ಊಹಾಪೋಹಗಳಿಗೆ ತೆರೆ ಎಳೆದ ದತ್ತ

By

Published : Dec 18, 2022, 6:38 AM IST

Updated : Dec 18, 2022, 9:34 AM IST

ಜೆಡಿಎಸ್ ತೊರೆದು ಕಾಂಗ್ರೆಸ್​ ಸೇರುವುದಾಗಿ ವೈಎಸ್‌ವಿ ದತ್ತ ಹೇಳಿದ್ದಾರೆ. ಬೆಳ್ತಂಗಡಿಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ಅವರ ಜೀವನಾಧಾರಿತ 'ವಸಂತ ವಿನ್ಯಾಸ' ಪುಸ್ತಕ ಅನಾವರಣ ಕಾರ್ಯಕ್ರಮದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.

KN_MNG
ವೈಎಸ್​ವಿ ದತ್ತ

ಕಾಂಗ್ರೆಸ್ ಸೇರುವುದು ಖಚಿತ ಎಂದ ದತ್ತ

ಬೆಳ್ತಂಗಡಿ(ದಕ್ಷಿಣ ಕನ್ನಡ): ನಾನು ಕಾಂಗ್ರೆಸ್ ಸೇರುವ ಬಗ್ಗೆ ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ನನ್ನ ಕ್ಷೇತ್ರದ ಜನತೆಯ ಅಭಿಪ್ರಾಯ, ಅಭಿಮಾನಿಗಳ ಒತ್ತಡದಿಂದಾಗಿ ಪಕ್ಷ ಸೇರುವ ಬಗ್ಗೆ ತೀರ್ಮಾನಿಸಿದ್ದೇನೆ. ಈ ಬಗ್ಗೆ ಸಿದ್ದರಾಮಯ್ಯ ಅವರ ಗಮನಕ್ಕೆ ತರಲಾಗಿದೆ. ಬೆಳಗಾವಿ ವಿಧಾನಮಂಡಲ ಅಧಿವೇಶನ ಮುಗಿದ ಕೂಡಲೇ ದಿನ ನಿಗದಿಗೊಳಿಸುವ ಬಗ್ಗೆ ತಿಳಿಸಿದ್ದಾರೆ ಎಂದು ವೈಎಸ್‌ವಿ ದತ್ತ ಹೇಳಿದ್ದಾರೆ. ಈ ಮೂಲಕ ಹಲವು ದಿನಗಳಿಂದ ಹರಿದಾಡುತ್ತಿದ್ದ ಉಹಾಪೋಹಗಳಿಗೆ ತೆರೆ ಎಳೆದರು.

Last Updated : Dec 18, 2022, 9:34 AM IST

ABOUT THE AUTHOR

...view details