ಕರ್ನಾಟಕ

karnataka

ಭ್ರಷ್ಟಾಚಾರದಲ್ಲಿ ಮುಳುಗಿದ ಬಿಜೆಪಿ ಸರ್ಕಾರಕ್ಕೆ ಯಾವುದೇ ನೈತಿಕತೆ ಇಲ್ಲ: ರಣದೀಪ್ ಸುರ್ಜೆವಾಲಾ

By

Published : Dec 20, 2022, 2:55 PM IST

Updated : Dec 20, 2022, 7:26 PM IST

ಮಠಗಳಿಗೆ ನೀಡುವ ಅನುದಾನದಲ್ಲಿಯೂ ಭ್ರಷ್ಟಾಚಾರ ನಡೆಯುತ್ತಿದೆ. ಶೇ 05 ಪರ್ಸೆಂಟ್ ಡಿಸ್ಕೌಂಟ್ ನೀಡಿ 35 ಪರ್ಸೆಂಟ್ ಕಮಿಷನ್ ಪಡೆಯಲಾಗಿದೆ. ಕರ್ನಾಟಕದಲ್ಲಿ 40% ಹೊರತಾಗಿ ಯಾವುದೇ ಕೆಲಸಗಳು ಆಗುತ್ತಿಲ್ಲ ಎಂದು ರಾಜ್ಯ ಕಾಂಗ್ರೆಸ್​ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಆರೋಪಿಸಿದ್ದಾರೆ.

Randeep Surjewala
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ

ಹುಬ್ಬಳ್ಳಿ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಮುಂದುವರಿಯುವ ಎಲ್ಲ ಅರ್ಹತೆಗಳನ್ನು ಕಳೆದುಕೊಂಡಿದೆ. ಒಂದು ಕ್ಷಣವೂ ಬಿಜೆಪಿಗೆ ಅಧಿಕಾರದಲ್ಲಿರುವ ನೈತಿಕತೆಯಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ವಾಗ್ದಾಳಿ ನಡೆಸಿದ್ದಾರೆ.

ಭ್ರಷ್ಟ ಬೊಮ್ಮಾಯಿ ಸರ್ಕಾರ..ನಗರದ ವಿಮಾನ‌ನಿಲ್ದಾಣದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಭ್ರಷ್ಟಾಚಾರದ ಸಮುದ್ರದಲ್ಲಿ ಮುಳುಗಿ ಹೋಗಿದೆ. ಪ್ರಜಾಪ್ರಭುತ್ವದ ಮೌಲ್ಯವನ್ನು ಗಾಳಿಗೆ ತೂರಿದ ಬಿಜೆಪಿಯದ್ದು ಅನೈತಿಕ ಸರ್ಕಾರ. ಎರಡೂ ಕೈಯಲ್ಲಿ ಲಂಚ ತೆಗೆದುಕೊಳ್ಳುತ್ತ ಬಿಜೆಪಿ ರಾಜ್ಯದಲ್ಲಿ ಲೂಟಿ ಮಾಡುತ್ತಿದೆ. ದೇಶದಲ್ಲಿಯೇ ಅತ್ಯಂತ ಭ್ರಷ್ಟ ಸರ್ಕಾರ ಅಂದ್ರೆ ಅದು ಬೊಮ್ಮಾಯಿ ಸರ್ಕಾರ. 40 ರಿಂದ 50 ಪರ್ಸೆಂಟೇಜ್ ಭ್ರಷ್ಟಾಚಾರದಲ್ಲಿ ಬಿಜೆಪಿ ಮುಳುಗಿದೆ ಎಂದು ಟೀಕಿಸಿದರು.

ಮಠದ ಅನುದಾನದಲ್ಲೂ ಭ್ರಷ್ಟಾಚಾರ..ಮಠಗಳಿಗೆ ನೀಡುವ ಅನುದಾನದಲ್ಲಿಯೂ ಭ್ರಷ್ಟಾಚಾರ ಬಿಟ್ಟಿಲ್ಲ. ಶೇ.05 ಪರ್ಸೆಂಟ್ ಡಿಸ್ಕೌಂಟ್ ನೀಡಿ 35 ಪರ್ಸೆಂಟ್ ಕಮಿಷನ್ ಹೊಡೆದಿದೆ. ಕರ್ನಾಟಕದಲ್ಲಿ 40% ಹೊರತಾಗಿ ಕರ್ನಾಟಕದಲ್ಲಿ ಯಾವುದೇ ಕೆಲಸಗಳು ಆಗುತ್ತಿಲ್ಲ. ರಾಜ್ಯದಲ್ಲಿ ನೌಕರಿಗಳು ಬಿಕರಿ ಆಗುತ್ತಿವೆ. ಪಿಎಸ್ಐ ಹಗರಣ ನೇರವಾಗಿ ಮುಖ್ಯಮಂತ್ರಿ ಮತ್ತು ಗೃಹ ಮಂತ್ರಿ ಬಾಗಿಲಿಗೆ ಬಂದಿದೆ ಎಂದು ಸುರ್ಜೆವಾಲಾ ಆರೋಪಿಸಿದರು.

ಎಡಿಜಿಪಿ ಬಂಧನ..ಎಡಿಜಿಪಿ ಮಟ್ಟದ ಅಧಿಕಾರಿಯೊಬ್ಬರನ್ನು ಬಂಧಿಸಿ ಇಟ್ಟಿರುವುದು ರಾಜ್ಯದ ಇತಿಹಾಸದಲ್ಲೇ ಮೊದಲು ಅನಿಸುತ್ತಿದೆ. ಎಡಿಜಿಪಿಗೆ ದುಡ್ಡು ಹೋಗಿದೆ ಅಂದ್ರೆ ಅದು ಗೃಹ ಸಚಿವರಿಗೂ ತಲುಪಿದೆ ಎಂದರ್ಥ. ಇದರ ತನಿಖೆಯನ್ನು ಯಾರು ಮಾಡಬೇಕು. ಸರ್ಕಾರದಿಂದ ಎಲ್ಲವನ್ನೂ ಮುಚ್ಚಿ ಹಾಕುವ ಪ್ರಯತ್ನ ನಡೆದಿದೆ. ಇದೆಲ್ಲಕ್ಕೂ ಅಂತ್ಯ ಹಾಡುವ ಸಮಯ ಬಂದಿದೆ. ಜನತೆ ಬಿಜೆಪಿಗೆ ತಕ್ಕ ಪಾಠ ಕಲಿಸಲು ಮುಂದಾಗಿದ್ದಾರೆ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಬೃಹತ್ ಪ್ರತಿಭಟನೆ..ಕಾಂಗ್ರೆಸ್ ಪಕ್ಷವು ಸಹ ಈ ನಿಟ್ಟಿನಲ್ಲಿ ಹೋರಾಟಗಳನ್ನು ರೂಪಿಸುತ್ತಿದೆ. ಕೃಷ್ಣ ನೀರಿನ ಬಳಕೆ ಕುರಿತಾಗಿ ಡಿಸೆಂಬರ್ 30 ರಂದು ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ ಹಾಗೂ ಮಹದಾಯಿ ವಿಚಾರವಾಗಿ ಹುಬ್ಬಳ್ಳಿ‌- ಧಾರವಾಡದಲ್ಲಿ ಜನವರಿ 2ಕ್ಕೆ ಹೋರಾಟ ನಡೆಸಲಾಗುತ್ತಿದೆ. ಇದಲ್ಲದೇ ಎಸ್ಸಿ, ಎಸ್ಟಿ ಸಮುದಾಯಕ್ಕೆ ಆಗಿರುವ ಅನ್ಯಾಯ ಖಂಡಿಸಿ ಚಿತ್ರದುರ್ಗದಲ್ಲಿ ಬೃಹತ್ ರಾಲಿ ಆಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.

ಇದನ್ನೂಓದಿ:ಪಂಚಮಸಾಲಿ ಹೋರಾಟದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ರಾಜಕೀಯ ಮಾಡುತ್ತಿದ್ದಾರೆ: ಯತ್ನಾಳ್

Last Updated :Dec 20, 2022, 7:26 PM IST

ABOUT THE AUTHOR

...view details