ಕರ್ನಾಟಕ

karnataka

ಪ್ರೇಮ ವಿವಾಹ, ರಾಜಕೀಯ ದ್ವೇಷ: ಗ್ರಾ.ಪಂ ಸದಸ್ಯನ ಭೀಕರ ಹತ್ಯೆ

By

Published : Jul 5, 2022, 10:51 AM IST

ಗಂಗಿವಾಳ ಗ್ರಾಮ ಪಂಚಾಯತಿ ಸದಸ್ಯ ದೀಪಕ್ ಪಠದಾರಿ ಅವರನ್ನು ಕೊಚ್ಚಿ ಕೊಲೆ ಮಾಡಲಾಗಿದೆ.

murder of village panchayat member in Hubli
ಗ್ರಾಮ ಪಂಚಾಯತಿ ಸದಸ್ಯ ದೀಪಕ್ ಪಠದಾರಿ ಕೊಲೆ

ಹುಬ್ಬಳ್ಳಿ(ಧಾರವಾಡ): ಪ್ರೇಮ ವಿವಾಹ, ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ರಾಯನಾಳ ಗ್ರಾಮದಲ್ಲಿ ನಡೆದಿದೆ‌. ಗಂಗಿವಾಳ ಗ್ರಾಮ ಪಂಚಾಯತಿ ಸದಸ್ಯ ದೀಪಕ್ ಪಠದಾರಿ ಕೊಲೆಯಾಗಿರುವ ವ್ಯಕ್ತಿ.

ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದೀಪಕ್ ಪಠದಾರಿ ವಿರುದ್ಧ ರೌಡಿಶೀಟರ್ ಖಾತೆ ತೆರೆಯಲಾಗಿತ್ತು. ಸ್ಥಳಕ್ಕೆ ಡಿಸಿಪಿ ಸಾಹಿಲ್ ಬಾಗ್ಲಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ ಮಾಡಿದ್ದಾರೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಗಾಗಲೇ 10ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಬಂಟ್ವಾಳದಲ್ಲಿ ಬೈಕ್​ ಹಾರನ್​ ವಿಚಾರವಾಗಿ ಯುವಕನ ಹತ್ಯೆ: ಆರೋಪಿಗಳಿಬ್ಬರ ಬಂಧನ

ABOUT THE AUTHOR

...view details