ಕರ್ನಾಟಕ

karnataka

ಹಿಂದಿನ ಸರ್ಕಾರಗಳ ನಿರ್ಧಾರದಿಂದ ಭಾರತಕ್ಕೆ ನುಗ್ಗುತ್ತಿರುವ  ನುಸುಳುಕೋರರು: ಶೋಭಾ ಕರಂದ್ಲಾಜೆ

By

Published : Jul 22, 2023, 3:47 PM IST

ಈಶಾನ್ಯ ಭಾಗದ ರಾಜ್ಯಗಳ ಬಗ್ಗೆ ಹಿಂದಿನ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯವಹಿಸಿತ್ತು. ನಾರ್ತ್ ಈಸ್ಟ್ ನಲ್ಲಿ ಭಾರತೀಯರು ಅಂತ ಒಪ್ಪಿಕೊಳ್ಳುತ್ತಿರಲಿಲ್ಲ. ಆದರೆ, ಈಗ ಇಡೀ ನಾರ್ತ್ ಈಸ್ಟ್ ಎಲ್ಲ ರಾಜ್ಯಗಳಲ್ಲಿ ನಮ್ಮ ಭಾರತ ಅಂತಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

Union Minister Shobha Karandlaje inaugurated the job fair
ಉದ್ಯೋಗ ಮೇಳಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ ನೀಡಿದರು

ಹುಬ್ಬಳ್ಳಿ:ಮಣಿಪುರದಲ್ಲಿ ಜಾತಿ, ಧರ್ಮ ಸಂಘರ್ಷವೂ ನಡೀತಾ ಇದೆ. ಹಿಂದಿನ ಸರ್ಕಾರಗಳ ತಪ್ಪುಗಳ ಕಾರಣದಿಂದ ದೊಡ್ಡ ಪ್ರಮಾಣದಲ್ಲಿ ಬೇರೆ ದೇಶದ ನುಸುಳುಕೋರರು ದಕ್ಷಿಣ ಭಾಗದಲ್ಲಿ ಜಮೆ ಆಗಿದ್ದಾರೆ. ಇವತ್ತು ನುಸುಳುಕೋರರನ್ನು ಹೊರ ಹಾಕುವ ಕೆಲಸ ಕೇಂದ್ರ ಸರ್ಕಾರ ನಿರಂತರ ಮಾಡ್ತಾ ಇದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.

ಹಿಂದಿನ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯವೇ ಕಾರಣ: ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶಾನ್ಯ ಭಾಗದ ಎಲ್ಲ ರಾಜ್ಯಗಳನ್ನು ಹಿಂದಿನ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ಮಾಡಿತ್ತು. ನಾರ್ತ್ ಈಸ್ಟ್ ನಲ್ಲಿ ಭಾರತೀಯರು ಅಂತ ಒಪ್ಪಿಕೊಳ್ಳುತ್ತಿರಲಿಲ್ಲ. ಆದರೆ, ಈಗ ಇಡೀ ನಾರ್ತ್ ಈಸ್ಟ್ ಎಲ್ಲ ರಾಜ್ಯಗಳಲ್ಲಿ ನಮ್ಮ ಭಾರತ ಅಂತಾರೆ. ಅಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಸಹ ನಡೀತಾ ಇದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಮೊದಲ ಬಾರಿಗೆ ಕೇಂದ್ರ ಸರ್ಕಾರದ ಯೋಜನೆಗಳನ್ನು ಅವರು ನೋಡ್ತಾ ಇದ್ದಾರೆ. ಹೀಗಾಗಿ ವಿದ್ರೋಹಿ ಚಟುವಟಿಕೆ ನಡೆಸೋದಕ್ಕೆ ಅಲ್ಲಿಗೆ ಬರ್ತಾರೆ. ಕೇಂದ್ರ ಸರ್ಕಾರ ನಾರ್ತ್ ಈಸ್ಟ್​​​​​​ನ ಎಲ್ಲಾ ರಾಜ್ಯಗಳಲ್ಲಿ ಶಾಂತಿ ನೆಲೆಸಬೇಕು. ಅವರು ಭಾರತ ಒಂದು ಭಾಗ ಆಗಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸೌಲಭ್ಯ ಅವರಿಗೆ ಸಿಗಬೇಕು ಎಂದರು.

ಕೇಂದ್ರ ಸರ್ಕಾರದ ಹೆಸರು ಕೆಟ್ಟದಾಗಿ ಬಿಂಬಿಸುವ ಪ್ರಯತ್ನ: ಪಾರ್ಲಿಮೆಂಟ್ ನಲ್ಲಿ ಚರ್ಚೆ ಬಿಟ್ಟು ಹೊರಗೆ ಚರ್ಚೆ ಮಾಡೋಕೆ ಕಾಂಗ್ರೆಸ್ ಸೇರಿದಂತೆ ಇತರ ಪಕ್ಷಗಳು ಮಾಡ್ತಾ ಇವೆ. ಯಾವುದೇ ಉತ್ತರಕ್ಕೂ ಭಾರತ ಸರ್ಕಾರ ಸಿದ್ದ ಇದೆ. ಪಶ್ಚಿಮ ಬಂಗಾಳದ ಮಾಲ್ದಾದಲ್ಲಿ ಮಹಿಳೆಯಾರನ್ನು ಬೆತ್ತಲೆಗೊಳಿಸಿದ ಪ್ರಕರಣ ಹೊರ ಬರ್ತಾ ಇದೆ. ರಾಜಕಾರಣ ಎಲ್ಲರೂ ಮಾಡ್ತಾರೆ. ಕೊಲ್ಲುವ ರಾಜಕಾರಣ ಪಶ್ಚಿಮಬಂಗಾಳದಲ್ಲಿ ನಡೀತಾ ಇದೆ. ಕೇಂದ್ರ ಸರ್ಕಾರದ ಹೆಸರು ಕೆಟ್ಟದಾಗಿ ಬಿಂಬಿಸುವ ಕೆಲಸ ನಡೀತಾ ಇದೆ ಎಂದು ತಿಳಿಸಿದರು.

ಜ್ಞಾನವ್ಯಾಪಿ ಮಸೀದಿ ಸರ್ವೆಗೆ ಕೋರ್ಟ್ ಅನುಮತಿ ವಿಚಾರ: ಇದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಜ್ಞಾನವ್ಯಾಪಿ ಮಸೀದಿ, ಕಾಶಿಯ ಒಂದು ಭಾಗ, ಜೀವನದಲ್ಲಿ ಒಂದು ದಿನವಾದರೂ ಕಾಶಿ ಯಾತ್ರೆಗೆ ಹೋಗಬೇಕು ಎನ್ನುವುದು ಹಿಂದೂಗಳ ಅಪೇಕ್ಷೆ ಎಂದರು. ಅಲ್ಲಿಂದ ಹಲವಾರು ಹಿಂದೂ ದೇವಾಲಯ ಧ್ವಂಸ ಮಾಡಲಾಗಿತ್ತು. ಧ್ವಂಸ ಮಾಡಿದ ದೇವಸ್ಥಾನದ ಕಂಬಗಳ ಮೇಲೆ ಮಸೀದಿಗಳ ನಿರ್ಮಾಣ ಮಾಡಲಾಯಿತು. ಇನ್ನು ಕಾಶಿಯ ಜ್ಞಾನವ್ಯಾಪಿ ಮಸೀದಿ ಕುರಿತು ನ್ಯಾಯಾಲಯದ ತೀರ್ಪು ಸ್ವಾಗತಾರ್ಹ ಎಂದು ಹೇಳಿದರು.


ಪ್ರತಿಪಕ್ಷದ ನಾಯಕನ ನೇಮಕ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಯಾವ ಭರವಸೆ ಕೊಟ್ಟು ಅಧಿಕಾರಕ್ಕೆ ಬಂತೋ, ಆ ಭರವಸೆಗಳನ್ನು ಈಗ ಈಡೇರಿಸುತ್ತಿಲ್ಲ. ಹಣಕಾಸಿನ ಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಅವರು ನೀಡಿದ 5 ಗ್ಯಾರಂಟಿಗಳನ್ನು ಮೊದಲ ಕ್ಯಾಬಿನೆಟ್ ನಲ್ಲಿ ಮಾಡ್ತೇವೆ ಎಂದು ಹೇಳಿದ್ದರು.

ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರಿಗೆ ಕೇಳ್ತೇನೆ ನಿಮ್ಮ ಮೊದಲ ಕ್ಯಾಬಿನೆಟ್ ಯಾವಾಗ...? ಮೊದಲ ಕ್ಯಾಬಿನೆಟ್​​​​ನಲ್ಲಿ ನೀವು ಕೊಡೋದು ಯಾವಾಗ..? ಫ್ರೀ ಬಸ್ ಗೆ ಕೂಡ ಸರಿಯಾದ ಯೋಜನೆ ಅಲ್ಲ. ಸಾರಿಗೆ ಸಂಸ್ಥೆಗಳು ನಷ್ಟದಲ್ಲಿ ನಡೀತಾ ಇವೆ. ಮುಂದಿನ ದಿನಗಳಲ್ಲಿ ಅವರಿಗೆ ಸಂಬಳ ಕೊಡುವುದಕ್ಕೂ ಕಷ್ಟ ಆಗುತ್ತೆ. ಅವರು ಹತಾಶೆರಾಗಿ ಮಾತನಾಡತ್ತಾ ಇದ್ದಾರೆ. ನಮ್ಮ ಸ್ಟ್ಯಾಟರ್ಜಿಯಲ್ಲಿ ಮುಂದಿನ ದಿನಗಳಲ್ಲಿ ನಾವು ನಾಯಕನನ್ನು ಆಯ್ಕೆ ಮಾಡ್ತೇವೆ ಎಂದು ಸ್ಪಷ್ಟಪಡಿಸಿದರು.

ಉದ್ಯೋಗ ಮೇಳಕ್ಕೆ ಸಚಿವೆ ಕರಂದ್ಲಾಜೆ ಚಾಲನೆ: ವಾಣಿಜ್ಯ ನಗರಿ ಹುಬ್ಬಳ್ಳಿಯ ಕೆಎಲ್ಇ ಸಂಸ್ಥೆಯ ಬಿವಿಬಿ ಕಾಲೇಜಿನಲ್ಲಿ ಆಯೋಜಿಸಿದ್ದ ಉದ್ಯೋಗ ಮೇಳಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಇಂದು ದೇಶಾದ್ಯಂತ 20 ಸಾವಿರ ಯುವಕ - ಯುವತಿಯರಿಗೆ ಉದ್ಯೋಗ ಒದಗಿಸುವ ಕೆಲಸ ನಡೆಯುತ್ತಿದೆ. ನಮ್ಮ ದೇಶ ಮುಂದಕ್ಕೆ ಹೋಗುತ್ತಿದೆ. ಆಹಾರ ಪದಾರ್ಥಗಳನ್ನು ಬೇರೆ ದೇಶಕ್ಕೆ ರಪ್ತು ‌ಮಾಡುವ ಹಂತಕ್ಕೆ ಬಂದಿದ್ದೇವೆ ಎಂದರು.


ರಸಗೊಬ್ಬರದಲ್ಲಿ ನಾವು ಸ್ವಾವಲಂಬಿ ಆಗಬೇಕು. ಸರ್ಕಾರ ಇರುತ್ತದೆ, ಸರ್ಕಾರ ಹೋಗುತ್ತದೆ. ಆದರೆ, ಪ್ರಧಾನಿ ಮೋದಿಯವರ‌ ಸಂಕಲ್ಪ ದೇಶ ‌ಪ್ರಗತಿಯಾಗಬೇಕು. ಸಂಬಳಕ್ಕಾಗಿ ದುಡಿಯಬಾರದು, ಕರ್ಮಯೋಗಿಗಳಾಗಬೇಕು ಎಂದು ಅವರು ಸಲಹೆ ನೀಡಿದರು. ನೀವು ಕೆಲಸ ಮಾಡಿ, ನಿಮ್ಮ‌ ಇಲಾಖೆಯನ್ನು ಮೇಲಕ್ಕೆ ಎತ್ತಿ ದೇಶವನ್ನು ಮುನ್ನಡೆಸಿ ಎಂದ ಅವರು, ಇದೇ ವೇಳೆ, ನೂತನವಾಗಿ ಕೆಲಸಕ್ಕೆ ಸೇರಿದ ಯುವಕರಿಗೆ ಪ್ರಮಾಣ ಪತ್ರ ನೀಡಿ ಶುಭ ಹಾರೈಸಿದರು.

ಇದನ್ನೂಓದಿ:ಮೋದಿ ಬಗ್ಗೆ ಹಗುರವಾಗಿ ಮಾತನಾಡಬಾರದು.. ಅದು ಶೋಭೆ ತರುವುದಿಲ್ಲ : ಸಿಎಂ ವಿರುದ್ಧ ಸಂಜಯ ಪಾಟೀಲ್​ ವಾಗ್ದಾಳಿ

ABOUT THE AUTHOR

...view details