ಕರ್ನಾಟಕ

karnataka

ಸಿಡಿ ಬಾಂಬ್ ಸಿಡಿಸಿದ್ದ ಜಾರಕಿಹೊಳಿ.. ಸಿಎಂ‌ ಜೊತೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷ

By

Published : Jan 31, 2023, 3:49 PM IST

Updated : Jan 31, 2023, 5:00 PM IST

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ ವಿರುದ್ಧ ಸಿಡಿ ಬಾಂಬ್​ ಸಿಡಿಸಿದ್ದ ರಮೇಶ್​ ಜಾರಕಿಹೊಳಿ - ಹುಬ್ಬಳ್ಳಿ ಏರ್​ಪೋರ್ಟ್​ನಲ್ಲಿ ಸಿಎಂ ಜೊತೆ ಪ್ರತ್ಯಕ್ಷ - ರಾಜಕೀಯ ಕುತೂಹಲ

ಮಾಜಿ ಸಚಿವ ರಮೇಶ್​ ಜಾರಕಿಹೊಳಿ
ಮಾಜಿ ಸಚಿವ ರಮೇಶ್​ ಜಾರಕಿಹೊಳಿ

ಸಿಎಂ‌ ಜೊತೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ರಮೇಶ್​ ಜಾರಕಿಹೊಳಿ ಪ್ರತ್ಯಕ್ಷ

ಹುಬ್ಬಳ್ಳಿ : ರಾಜ್ಯ ರಾಜಕಾರಣದಲ್ಲಿ ಸಿಡಿ ಹಾಗೂ ಆಡಿಯೋ ವಿಚಾರ ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕುತ್ತಲೇ ಬಂದಿದೆ. ಈಗ ಸಿಡಿ ವಿಷಯಕ್ಕೆ ಸಂಬಂಧಿಸಿದಂತೆ ಮತ್ತೊಂದು ಬಾಂಬ್ ಸಿಡಿಸಿರುವ ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಸಿಎಂ ಜೊತೆಗೆ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ದಿಢೀರ್​ ಪ್ರತ್ಯಕ್ಷರಾಗಿದ್ದಾರೆ. ನಿನ್ನೆ ತಾನೇ ಸಿಡಿ ಬಾಂಬ್ ಸಿಡಿಸಿದ ಜಾರಕಿಹೊಳಿ ಹುಬ್ಬಳ್ಳಿಯಲ್ಲಿ ಪ್ರತ್ಯಕ್ಷವಾಗಿದ್ದು, ಬೆಂಗಳೂರಿನಿಂದ ಹುಬ್ಬಳ್ಳಿಗೆ ಸಿಎಂ ಜೊತೆಗೆ ಆಗಮಿಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಸಾಕಷ್ಟು ಕುತೂಹಲಕ್ಕೆ ಕಾರಣರಾಗಿದ್ದಾರೆ. ಇನ್ನು, ಸಚಿವ ಶಂಕರಪಾಟೀಲ ಮುನೇನಕೊಪ್ಪ, ಶಾಸಕ ಅರವಿಂದ ಬೆಲ್ಲದ ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು,‌ ಸಿಡಿ ಬಾಂಬ್ ಸಿಡಿಸಿದ ರಮೇಶ್​ ಜಾರಕಿಹೊಳಿಯವರ ಸುತ್ತ ರಾಜ್ಯದ ದೃಷ್ಟಿ ನೆಟ್ಟಿದೆ.

ಇದನ್ನೂ ಓದಿ:ತೆರಿಗೆ ವಂಚನೆ ಆರೋಪ.. ಬೆಂಗಳೂರಲ್ಲಿ ಚಿನ್ನದ ವ್ಯಾಪಾರಿಗಳಿಗೆ ಐಟಿ ಶಾಕ್: 25ಕ್ಕೂ ಹೆಚ್ಚು ಜ್ಯುವೆಲ್ಲರಿ ಶಾಪ್​​ಗಳ ಮೇಲೆ ದಾಳಿ!​

ಕಾನೂನಾತ್ಮಕ ಹೋರಾಟದ ನಂತರವೇ ಮಹದಾಯಿ ಬಗ್ಗೆ ಸುಪ್ರೀಂ ಆದೇಶಿಸಿದೆ: ಮಹದಾಯಿ ಯೋಜನೆ ಅನುಷ್ಠಾನ ವಿಚಾರವಾಗಿ ಗೋವಾ ಸರ್ಕಾರದ ನಡೆಯ ಬಗ್ಗೆ ನಮಗೆ ಗೊತ್ತಿಲ್ಲ. ಈಗಾಗಲೇ ಕಾನೂನಾತ್ಮಕ ಹೋರಾಟವಾಗಿ ಸುಪ್ರೀಂ ಕೋರ್ಟ್ ಆದೇಶದ ಮೇಲೆ ಟ್ರಿಮಿನಲ್ ರಚನೆಯಾಗಿ ಅದರ ಪರಿಶೀಲನೆ ಸಹ ಆಗಿದೆ. ಅಲ್ಲದೇ ತೀರ್ಪು ಕೂಡಾ ನೀಡಿದೆ. ಮಹದಾಯಿ ಯೋಜನೆ ಅನುಷ್ಠಾನವನ್ನು ಕೇಂದ್ರ ಸರ್ಕಾರ 2016ರಲ್ಲಿ ಡಿಪಿಆರ್ ನೀಡಲಾಗಿತ್ತು. ಸದ್ಯ ಡಿಪಿಆರ್ ಸಹ ಅನುಮತಿ ನೀಡಿದೆ. ಕಾನೂನು ಹೋರಾಟವಾಗಿಯೇ ಇದೆಲ್ಲ ಆಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸಿಎಂ ಬಸವರಾಜ ಬೊಮ್ಮಾಯಿ

ಇದನ್ನೂ ಓದಿ :ಭಾರತದ ಅಧ್ಯಕ್ಷತೆಯಲ್ಲಿ ಮೊದಲ ಬಾರಿಗೆ ಜಿ20 ಎನರ್ಜಿ ಟ್ರಾನ್ಸಿಶನ್ ವರ್ಕಿಂಗ್ ಗ್ರೂಪ್ ಸಭೆ

ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಮಹದಾಯಿಯ ಬಗ್ಗೆ ಸುಪ್ರೀಂ ಕೋರ್ಟ್ ತನ್ನ ನಿಲುವನ್ನು ವ್ಯಕ್ತಪಡಿಸಿದೆ. ಅಲ್ಲದೇ ಈಗಾಗಲೇ ಕಾನೂನಾತ್ಮಕ ಹೋರಾಟದ ರೂಪುರೇಷೆಗಳನ್ನು ಪರಿಶೀಲನೆ ಮಾಡಿಯೇ ನಿರ್ಧಾರವನ್ನು ಕೊಟ್ಟಿದೆ ಎಂದು ಹೇಳಿದರು.

ಹೆಚ್. ವಿಶ್ವನಾಥ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಹೆಚ್. ವಿಶ್ವನಾಥ ಅವರ ಹೇಳಿಕೆಗೆ ಯಾವತ್ತೂ ಪ್ರತಿಕ್ರಿಯಿಸಿಲ್ಲ. ಅವರು ಪದೇ ಪದೆ ಈ ರೀತಿ ಹೇಳಿಕೆ ನೀಡುತ್ತಿರುತ್ತಾರೆ. ಅದರ ಬಗ್ಗೆ ಹೆಚ್ಚು ಮಾತನಾಡುವ ಅವಶ್ಯಕತೆ ಇಲ್ಲ ಎಂದರು. ಸಿಎಂ ಹಾಗೂ ಮಾಜಿ ಸಿಎಂ ಪುಡಿ ರೌಡಿಗಳಂತೆ ವರ್ತಿಸುತ್ತಾರೆ ಎನ್ನುವಂತಹ ಹೆಚ್​. ವಿಶ್ವನಾಥ ಹೇಳಿಕೆಗೆ ಯಾವುದೇ ಪ್ರತಿಕ್ರಿಯೆ ನೀಡದೇ ಮುಂದಿನ ವಿಷಯ ಕೈಗೆತ್ತಿಕೊಂಡರು.

ಇದನ್ನೂ ಓದಿ:'ಜೀವಂತ ಇದ್ದಾಗಲೇ ಬಿಜೆಪಿಗೆ ಸೇರಿಸೋಲ್ಲ': ಸತ್ರೂ ಬಿಜೆಪಿ ಸೇರಲ್ಲ ಎಂದ ಸಿದ್ದರಾಮಯ್ಯಗೆ ಈಶ್ವರಪ್ಪ ತಿರುಗೇಟು

ಇನ್ನು, ಫೆಬ್ರವರಿ 06 ರಂದು ಪ್ರಧಾನಿ ಮೋದಿ ರಾಜ್ಯದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ. ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಸೇರಿದಂತೆ ಬೆಂಗಳೂರು ಹಲವಾರು ಕಾರ್ಯಕ್ರಮಗಳಲ್ಲಿ‌ ಮೋದಿಯವರು ಭಾಗವಹಿಸುತ್ತಿದ್ದಾರೆ‌ ಎಂದು ಅವರು ಹೇಳಿದರು.

ಸಿಡಿ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಆಗ್ರಹಿಸಿರುವ ಕುರಿತ ಮಾಧ್ಯಮದ ಪ್ರಶ್ನೆಗೆ ಸಿಎಂ ಬಸವರಾಜ ಬೊಮ್ಮಾಯಿಯವರು ಯಾವುದೇ ಪ್ರತಿಕ್ರಿಯೆ ನೀಡದೆ ಮುನ್ನಡೆದರು.

ಇದನ್ನೂ ಓದಿ :ರಾಜಕಾರಣ ಹೊಲಸಾಗಿದೆ.. ಮೌಲ್ಯಗಳನ್ನು ಕಳೆದುಕೊಂಡಿದೆ: ಹೆಚ್.ವಿಶ್ವನಾಥ್​​ ಅಸಮಾಧಾನ

Last Updated :Jan 31, 2023, 5:00 PM IST

ABOUT THE AUTHOR

...view details