ಹುಬ್ಬಳ್ಳಿ: ಯೋಗೇಶ್ ಗೌಡ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ಅಧಿಕಾರಿಗಳು ಮತ್ತಷ್ಟು ಚುರುಕುಗೊಳಿಸಿದ್ದಾರೆ. ಈಗಾಗಲೇ ಮಾಜಿ ಸಚಿವ ವಿನಯ್ ಕುಲಕರ್ಣಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಅಧಿಕಾರಿಗಳು ಕಾಂಗ್ರೆಸ್ ಮುಖಂಡ ನಾಗರಾಜ್ ಗೌರಿ ಅವರನ್ನ ವಿಚಾರಣೆಗೆ ಒಳಪಡಿಸಿದ್ದಾರೆ.
ಯೋಗೇಶ್ ಗೌಡ ಪತ್ನಿ ಮಲ್ಲಮ್ಮ ಕಾಂಗ್ರೆಸ್ ಪಕ್ಷ ಸೇರುವಾಗ ನಗರದ ಖಾಸಗಿ ಹೋಟೆಲ್ನಲ್ಲಿ ಬಸವರಾಜ್ ಮುತ್ತಗಿ ಹಾಗೂ ನಾಗರಾಜ್ ಗೌರಿ ಎಂಬುವವರು ಸಭೆ ನಡೆಸಿದ್ದರು ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಕಲೆ ಹಾಕಿದ ಸಿಬಿಐ ಅಧಿಕಾರಿಗಳು, ಅಂದು ಆರೋಪಿಗಳು ಸಭೆ ನಡೆಸಿದ್ದ ಖಾಸಗಿ ಹೋಟೆಲ್ಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.
ಈ ನಡುವೆ ಬಸವರಾಜ ಮುತ್ತಗಿ ಅವರನ್ನ ತೀವ್ರ ವಿಚಾರಣೆಗೆ ಒಳಪಡಿಸಿರುವ ಸಿಬಿಐ ಅಧಿಕಾರಿಗಳು, ಘಟನೆಗೆ ಸಂಬಂಧಿಸಿದಂತೆ ಇಂಚಿಂಚು ಮಾಹಿತಿ ಕಲೆ ಹಾಕುತ್ತಿದೆ ಎಂದು ಹೇಳಲಾಗುತ್ತಿದೆ.
Last Updated :Nov 11, 2020, 3:13 PM IST