ಕರ್ನಾಟಕ

karnataka

ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಸಾವಿಗೆ ಸಂತಾಪ ಸೂಚಿಸಿದ ಸಿಸಿ ಪಾಟೀಲ್​​

By

Published : Nov 25, 2022, 5:13 PM IST

ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಇಂದು ಹೃದಯಾಘಾತದಿಂದ ಮೃತಪಟ್ಟಿದ್ದು, ಅವರ ಅಗಲಿಕೆ ಅತೀವ ನೋವು ತಂದಿದೆ ಎಂದು ಅವರ ನಿಧನಕ್ಕೆ ಸಚಿವ ಸಿಸಿ ಪಾಟೀಲ್​ ಸಂತಾಪ ಸೂಚಿಸಿದರು.

C c patil
ಶ್ರೀಶೈಲಪ್ಪ ಬಿದರೂರು ಸಾವಿಗೆ ಸಂತಾಪ ಸೂಚಿಸಿದ ಸಿಸಿ ಪಾಟೀಲ್

ಗದಗ:ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ನಿಧನಕ್ಕೆ ಸಚಿವ ಸಿಸಿ ಪಾಟೀಲ್ ಸಂತಾಪ ಸೂಚಿಸಿದ್ದಾರೆ. ಈ ಕುರಿತು ನಗರದಲ್ಲಿ ಮಾತನಾಡಿದ ಅವರು, ಎರಡು ಬಾರಿ ಶಾಸಕರಾಗಿದ್ದಂತಹ ಬಿದರೂರು ಅವರ ಅಗಲಿಕೆ ಅತೀವ ನೋವು ತಂದಿದೆ. ಗದಗ ಮತ್ತು ರೋಣ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಎರುಡ ಬಾರಿ ಶಾಸಕರಾಗಿದ್ದ ಅವರು ಸಾಕಷ್ಟ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ ಎಂದರು.

ಬಿಜೆಪಿಯಿಂದ ಶಾಸಕರಾಗಿದ್ದ ಅವರು, ಅನಿವಾರ್ಯ ಕಾರಣದಿಂದ ಕಾಂಗ್ರೆಸ್ ಸೇರಿದ್ದರು. ಕಾಂಗ್ರೆಸ್​​ನಲ್ಲೂ ಟಿಕೆಟ್ ಆಕಾಂಕ್ಷಿಯಾಗಿದ್ದರು ಎನ್ನುವ ಸುದ್ದಿ ಕೇಳಿದ್ದೆ. ರಾಜಕಾರಣ ಏನೇ ಇರಲಿ ಅವರು ನನ್ನ ಆತ್ಮೀಯರು ಹಾಗೂ ದೂರದ ಸಂಬಂಧಿಯಾಗಿದ್ದರು. ಅಲ್ಲದೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನಿಕಟ ವರ್ತಿಗಳೂ ಆಗಿದ್ದರು. ಮುಖ್ಯಮಂತ್ರಿಗಳಿಗೂ ವಿಷಯ ತಿಳಿಸಿದ್ದೇನೆ. ಅವರ ಅಗಲಿಕೆ ತೀವ್ರ ನೋವು ತಂದಿದ್ದು, ದೇವರು ಅವರ ಕುಟುಂಬಕ್ಕೆ ದುಖಃ ಬರಿಸುವ ಶಕ್ತಿ ನೀಡಲಿ ಎಂದರು.

ಶ್ರೀಶೈಲಪ್ಪ ಬಿದರೂರು ಸಾವಿಗೆ ಸಂತಾಪ ಸೂಚಿಸಿದ ಸಿಸಿ ಪಾಟೀಲ್

ಇನ್ನು ರೋಣ ತಾಲೂಕಿನ ಸೂಡಿ ಗ್ರಾಮದಲ್ಲಿ ಅವರ ಅಂತ್ಯ ಸಂಸ್ಕಾರ ಮಾಡಬೇಕೆಂಬುದರ ಬಗ್ಗೆ ಯೋಚಿಸುತ್ತಿದ್ದೇವೆ. ಅವರ ಕುಟುಂಬಸ್ಥರ ಜೊತೆಗೆ ಚರ್ಚಿಸಿ ಅಂತ್ಯ ಸಂಸ್ಕಾರದ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದರು.

ಇದನ್ನೂ ಓದಿ:ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ನಿಧನ: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆ ನ.27ಕ್ಕೆ ಮುಂದೂಡಿಕೆ

ABOUT THE AUTHOR

...view details