ಕರ್ನಾಟಕ

karnataka

ಬಂಕಾಪುರ ಹಿಂದೂ ಮಹಾಸಭಾ ಗಣಪತಿ ನಿಮಜ್ಜನ ಸಂಭ್ರಮ

By

Published : Oct 1, 2021, 6:31 AM IST

Updated : Oct 1, 2021, 6:56 AM IST

ನಿನ್ನೆ ಹಾವೇರಿಯಲ್ಲಿ ಬಂಕಾಪುರ ಹಿಂದೂ ಮಹಾಸಭಾ ಗಣಪತಿ ನಿಮಜ್ಜನ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು. ಮೆರವಣಿಗೆ ಉದ್ದಕ್ಕೂ ಯುವ ಜನತೆ ಡಿಜೆ ಸೌಂಡ್​ಗೆ ಸ್ಟೆಪ್ ಹಾಕಿ ಸಂಭ್ರಮಿಸಿದರು.

Ganapathi Nimajjana Celebration
ಗಣಪತಿ ನಿಮಜ್ಜನ ಸಂಭ್ರಮ

ಹಾವೇರಿ: ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಹಿಂದೂ ಮಹಾಸಭಾ ಗಣಪತಿ ನಿಮಜ್ಜನ ಕಾರ್ಯಕ್ರಮ ಗುರುವಾರ ಸಂಭ್ರಮದಿಂದ ನಡೆಯಿತು. ಕಳೆದ ಹಲವು ವರ್ಷಗಳಿಂದ ಬಂಕಾಪುರದಲ್ಲಿ ಹಿಂದೂ ಮಹಾಸಭಾ ವತಿಯಿಂದ ಗಣೇಶಮೂರ್ತಿ ಸ್ಥಾಪಿಸಲಾಗುತ್ತಿದೆ. ಈ ವರ್ಷ 21ದಿನಗಳ ಕಾಲ ಗಣೇಶನನ್ನು ಪ್ರತಿಷ್ಠಾಪನೆ ಮಾಡಲಾಗಿತ್ತು.

ಗಣಪತಿ ಮೂರ್ತಿಯನ್ನು ಬಂಕಾಪುರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಿನ್ನೆ ಮೆರವಣಿಗೆ ಮಾಡಿ, ಬಳಿಕ ನಿಮಜ್ಜನ ಮಾಡಲಾಯಿತು. ಮೆರವಣಿಗೆ ಉದ್ದಕ್ಕೂ ಯುವ ಜನತೆ ಡಿಜೆ ಸೌಂಡ್​ಗೆ ಸ್ಟೆಪ್ ಹಾಕಿ ಸಂಭ್ರಮಿಸಿದರು.

ಬಂಕಾಪುರ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ

ಇನ್ನು ಮುಂಜಾಗೃತ ಕ್ರಮವಾಗಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಆದರೆ, ಮೆರವಣಿಗೆ ವೇಳೆ ಯುವಕರು ಕೊರೊನಾ ಮುಂಜಾಗ್ರತಾ ಕ್ರಮಗಳನ್ನು ಗಾಳಿಗೆ ತೂರಿದ ದೃಶ್ಯ ಕಂಡು ಬಂದಿತು.

Last Updated : Oct 1, 2021, 6:56 AM IST

ABOUT THE AUTHOR

...view details