ಕರ್ನಾಟಕ

karnataka

ಹಾನಗಲ್ ಉಪಕದನ: ನಾಮಪತ್ರ ಹಿಂಪಡೆಯಲು ಇಂದು ಕೊನೆಯ ದಿನ

By

Published : Oct 13, 2021, 7:04 AM IST

ಹಾನಗಲ್​ ಉಪಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳು ಮತದಾರರ ಮನವೊಲಿಕೆಗೆ ಮುಂದಾಗಿದ್ದಾರೆ. ಸದ್ಯ ಅವರು ಮನೆ ಮನೆಗೆ ತೆರಳಿ ಮತ ಯಾಚಿಸುತ್ತಿದ್ದಾರೆ.

karnataka-by-poll-last-day-for-withdraw-nomination
ಹಾನಗಲ್ ಉಪಕದನ

ಹಾವೇರಿ:ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣ ರಂಗೇರುತ್ತಿದೆ. ನಾಮಪತ್ರ ಪರಿಶೀಲನೆಯ ನಂತರ ಕಣದಲ್ಲಿ 17 ಅಭ್ಯರ್ಥಿಗಳು ಉಳಿದಿದ್ದಾರೆ. ನಾಮಪತ್ರ ವಾಪಸ್ ಪಡೆಯಲು ಇಂದು ಕೊನೆಯ ದಿನವಾಗಿದ್ದು ನಂತರವಷ್ಟೇ ಅಂತಿಮ ಹಣಾಹಣಿಯ ಚಿತ್ರಣ ಸಿಗಲಿದೆ.

ಅಕ್ಟೋಬರ್ 30ರಂದು ಚುನಾವಣೆ ನಡೆಯಲಿದೆ. ಸದ್ಯ ಅಭ್ಯರ್ಥಿಗಳು ಮತಬೇಟೆಯಲ್ಲಿ ತೊಡಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಮತಯಾಚನೆಯಲ್ಲಿ ಬ್ಯುಸಿಯಾಗಿ ಕಂಡುಬಂದರು.

ಹಾನಗಲ್ ಗದ್ದುಗೆ ಗುದ್ದಾಟ

ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ್ ಕೂಡಾ ಪ್ರಚಾರದಲ್ಲಿ ಹಿಂದೆ ಬಿದ್ದಿಲ್ಲ. ಪ್ರಮುಖ ಬಿಜೆಪಿ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರು ಮತಯಾಚನೆಯಲ್ಲಿ ತೊಡಗಿದ್ದಾರೆ.

ಇತ್ತ ಜೆಡಿಎಸ್​​ ಅಭ್ಯರ್ಥಿ ನಿಯಾಜ್ ಮತದಾರರ ಸೆಳೆಯುವಲ್ಲಿ ನಿರತರಾಗಿದ್ದಾರೆ. ಈ ನಡುವೆ ಪಕ್ಷೇತರ ಅಭ್ಯರ್ಥಿಗಳು ಸಹ ಭರ್ಜರಿ ಪ್ರಚಾರ ಕಾರ್ಯದಲ್ಲಿದ್ದು, ಕ್ಷೇತ್ರದಲ್ಲಿ ಜಯ ದಾಖಲಿಸಲು ಕಸರತ್ತು ನಡೆಸುತ್ತಿದ್ದಾರೆ.

ಇದನ್ನೂ ಓದಿ:ಕಾಂಗ್ರೆಸ್ 17 ಶಾಸಕರನ್ನು ಕಳೆದುಕೊಳ್ಳಲು ಜೆಡಿಎಸ್ ಜೊತೆಗಿನ ಮೈತ್ರಿಯೇ ಕಾರಣ: ಯತೀಂದ್ರ

ABOUT THE AUTHOR

...view details