ಕರ್ನಾಟಕ

karnataka

ಆತ್ಮಹತ್ಯೆ ಮಾಡಿಕೊಂಡ ರೈತನ ಬಗ್ಗೆ ಕೋಳಿವಾಡ ಹಗುರ ಮಾತು? ವಿಡಿಯೋ ವೈರಲ್

By

Published : Sep 9, 2022, 12:53 PM IST

Updated : Sep 9, 2022, 1:05 PM IST

KB Koliwada

ಆತ್ಮಹತ್ಯೆ ಮಾಡಿಕೊಂಡ ರೈತನ ಬಗ್ಗೆ ವಿಧಾನಸಭೆ ಮಾಜಿ ಅಧ್ಯಕ್ಷ ಕೆ ಬಿ ಕೋಳಿವಾಡ ಹಗುರ ಮಾತುಗಳನ್ನಾಡಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದೆ.

ಹಾವೇರಿ:ಆತ್ಮಹತ್ಯೆ ಮಾಡಿಕೊಂಡ ರೈತರೊಬ್ಬರ ಕುರಿತು ಹಗುರವಾಗಿ ಮಾತನಾಡಿದ್ದಾರೆ ಎಂಬ ಆರೋಪ ವಿಧಾನಸಭೆ ಮಾಜಿ ಅಧ್ಯಕ್ಷ ಕೆ ಬಿ ಕೋಳಿವಾಡ ವಿರುದ್ಧ ಕೇಳಿ ಬಂದಿದೆ. ಪಕ್ಷ ಸಂಘಟನೆ ಮಾಡಲು ಮುಖಂಡರೊಬ್ಬರ ಮನೆಯಲ್ಲಿ ಕಾರ್ಯಕರ್ತರ ಜೊತೆ ಸಭೆ ನಡೆಸುತ್ತಿದ್ದಾಗ ಕಾರ್ಯಕರ್ತರ ಮುಂದೆ ಮಾತನಾಡಿದ ಕೋಳಿವಾಡ, ರೈತನ ಕುರಿತು ವ್ಯಂಗ್ಯವಾಡಿದ್ದಾರೆ ಎನ್ನಲಾಗುತ್ತಿದೆ.

ವಿಡಿಯೋದಲ್ಲೇನಿದೆ? ಕೋಳಿವಾಡ ಅವರು ಬೆಂಬಲಿಗರ ಜೊತೆ ಮಾತನಾಡುತ್ತಿರುವಾಗ ಫೋನ್ ಕರೆ ಬರುತ್ತದೆ. ಈ ಸಂದರ್ಭದಲ್ಲಿ ಮೃತ ರೈತನಿಗೆ ಹೂಮಾಲೆ ಹಾಕಲು ಬರುವಂತೆ ಕರೆ ಮಾಡಿದ್ದ ಕಾಂಗ್ರೆಸ್ ಕಾರ್ಯಕರ್ತ ಕೇಳಿದ್ದಾರೆ. ಮೊಬೈಲ್​​ನಲ್ಲಿ ಮಾತನಾಡಿದ ಬಳಿಕ ಅವರು ಆತ್ಮಹತ್ಯೆ ಮಾಡಿಕೊಂಡ ರೈತನ ಬಗ್ಗೆ ಹಗುರ ಪದಗಳನ್ನು ಬಳಸಿ ಮಾತನಾಡಿದ್ದಾರೆ ಎಂದು ಹೇಳಲಾಗಿದೆ.

ವೈರಲ್ ವಿಡಿಯೋ

ಕೋಳಿವಾಡ ಅವರು ಹಾವೇರಿ ಜಿಲ್ಲೆ ರಾಣೆಬೆನ್ನೂರು ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕರಾಗಿದ್ದಾರೆ. 5 ಬಾರಿ ಶಾಸಕರಾಗಿ, ಒಂದು ಬಾರಿ ಸಚಿವರಾಗಿಯೂ ಹಾಗೂ ವಿಧಾನಸಭೆ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಹಿರಿಯ ರಾಜಕಾರಣಿಯ ಬಾಯಲ್ಲಿ ಬಂದ ಹಗುರ ಮಾತುಗಳು ರೈತರ ಅಸಮಾಧಾನಕ್ಕೆ ಕಾರಣವಾಗಿದೆ.

ಇದನ್ನೂ ಓದಿ:ಉಮೇಶ್​​ ಕತ್ತಿ ಕ್ಷೇತ್ರಕ್ಕೆ ನಡೆಯಲಿದೆಯೇ ಬೈ ಎಲೆಕ್ಷನ್?: ರಾಜಕೀಯ ಪಕ್ಷಗಳಲ್ಲಿ ಹೆಚ್ಚಿದ ಕುತೂಹಲ

Last Updated :Sep 9, 2022, 1:05 PM IST

ABOUT THE AUTHOR

...view details