ಕಲಬುರಗಿ: ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶಾಂತಪ್ಪ ಕೂಡಲಗಿ ಅವರ ಸಹೋದರ ಹನುಮಂತ ಅವರ ಕೊಲೆ ಆರೋಪದಲ್ಲಿ ಬಿಜೆಪಿ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ವಿರುದ್ಧ ಪ್ರಥಮ ವರ್ತಮಾನ ವರದಿ (ಎಫ್ಐಆರ್) ದಾಖಲಾಗಿದೆ. ಜೇವರ್ಗಿ ತಾಲೂಕಿನ ಬಳ್ಳುಂಡಗಿ ಗ್ರಾಮದ ಬಳಿ ಹನುಮಂತ ಅವರ ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದರು.
ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಹನುಮಂತ ಅವರ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿತ್ತು. ಈ ಘಟನೆಗೆ ಸಂಬಂಧಪಟ್ಟಂತೆ ಒಟ್ಟು 30 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ಹಾಗೂ ಸಹೋದರ ಬಸವರಾಜ್ ಪಾಟೀಲ್ ವಿರುದ್ಧ ಕೊಲೆಗೆ ಕುಮ್ಮಕ್ಕು ನೀಡಿರುವ ಆರೋಪ ಕೇಳಿ ಬಂದಿದೆ.